ಸುರತ್ಕಲ್ : ಶಾಲೆಗೆಂದು ತಯಾರಾಗುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತಕ್ಕೆ ತುತ್ತಾಗಿ ಮೃತಪಟ್ಟ ದಾರುಣ ಘಟನೆ ಜ.10 ರ ಸೋಮವಾರ ಬೆಳಗ್ಗೆ ನಡೆದಿದೆ.
ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಮೊಹಮ್ಮದ್ ಹಸೀಮ್ (17) ಮೃತ ಬಾಲಕ. ಬೆಳಗ್ಗೆ ಸಿದ್ದನಾಗಿದ್ದ ಹಸೀಮ್ಗೆ ಏಕಾಏಕಿ ತಲೆ ಸುತ್ತು ಬಂದು ಬಿದ್ದಿದ್ದು, ಮನೆಮಂದಿ ತತ್ಕ್ಷಣ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದು. ಆದರೆ ಅಲ್ಲಿ ಮೃತಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದು, ಬದುಕುಳಿಯುವ ಆಸೆಯಿಂದ ಪೋಷಕರು ಮುಕ್ಕದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ದುರದೃಷ್ಟವಶಾತ್ ಅದಾಗಲೇ ಕೊನೆಯುಸಿರೆಳೆದಿದ್ದ. ಅಬ್ದುಲ್ ರೆಹಮಾನ್ ದಂಪತಿ ಮೂವರು ಪುತ್ರರಲ್ಲಿ ಮೃತ ಹಸೀಮ್ ಎರಡನೆಯವನಾಗಿದ್ದಾನೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…