ಸುಲಭವಾಗಿ ಮಾಡಬಹುದಾದ ಚಿಲ್ಲಿ ಚಿಕನ್ -Vishwanews24

ನೀವು ಚಿಕನ್‌ ಪ್ರಿಯರೇ, ನಿಮ್ಮಿಷ್ಟದ ಚಿಲ್ಲಿ ಚಿಕನ್‌ ರೆಸಿಪಿಯನ್ನು ಸುಲಭದಲ್ಲಿ ಮಾಡಬಹುದಾಗಿದ್ದು, ರೆಸಿಪಿ ನೋಡಿ ಇಲ್ಲಿದೆ .ಚಿಲ್ಲಿ ಚಿಕನ್ ಕೋಳಿಮಾಂಸದ ಒಂದು ಜನಪ್ರಿಯ ಇಂಡೊ-ಚೈನೀಸ್ ಖಾದ್ಯ ಇದನ್ನು ನೀವು ಅನ್ನ, ರೊಟ್ಟಿ, ದೋಸೆ , ಚಪಾತಿಯೊಂದಿಗೆ ತಿನ್ನಬಹುದು.

ಬನ್ನಿ, ಈ ಸುಲಭ ಹಾಗೂ ರುಚಿಕಟ್ಟಾದ ಖಾದ್ಯವನ್ನು ತಯಾರಿಸುವ ಬಗೆಯನ್ನು ಈಗ ನೋಡೋಣ….

ಅಗತ್ಯವಿರುವ ಸಾಮಾಗ್ರಿಗಳು:

ಅರ್ಧ ಕೆಜಿ ಬೋನ್‌ಲೆಸ್‌ ಚಿಕನ್‌
ಅರ್ಧ ಕಪ್‌ ಜೋಳದ ಹಿಟ್ಟು

ಮೊಟ್ಟೆ- 1

ಶುಂಠಿ ಪೇಸ್ಟ್ – ½ ಚಿಕ್ಕಚಮಚ

ಬೆಳ್ಳುಳ್ಳಿ ಪೇಸ್ಟ್ – ½ ಚಿಕ್ಕ ಚಮಚ

ಎಣ್ಣೆ

ಉಪ್ಪು

ಈರುಳ್ಳಿ – ಎರಡು ಕಪ್

ಸೋಯಾ ಸಾಸ್ : ಒಂದು ದೊಡ್ಡ ಚಮಚ

ಹಸಿಮೆಣಸು : ಎರಡು :

ಶಿರ್ಕಾ: ಎರಡು ದೊಡ್ಡಚಮಚ

ನೀರು: ಅಗತ್ಯಕ್ಕೆ ತಕ್ಕಷ್ಟು

ವಿಧಾನ:

ಮೊದಲು ಮೆಕ್ಕೆಜೋಳದ ಹಿಟ್ಟು, ಶುಂಟಿ ಪೇಸ್ಟ್, ಬೆಳ್ಳುಳ್ಳಿ ಪೇಸ್ಟ್, ಉಪ್ಪು, ಮೊಟ್ಟೆ ಮತ್ತು ಕೊಂಚ ನೀರನ್ನು ಚೆನ್ನಾಗೆ ಬೆರೆಸಿ. ಈ ಮಿಶ್ರಣವನ್ನು ದಪ್ಪನಾಗಿ ಎಲ್ಲಾ ಕೋಳಿಮಾಂಸದ ತುಂಡುಗಳ ಎಲ್ಲಾ ಬದಿಗಳಿಗೆ ದಪ್ಪನಾಗಿ ಮೆತ್ತಿಕೊಳ್ಳುವಂತೆ ಹಚ್ಚಿ.

ಒಂದು ದಪ್ಪತಳದ ಬಾಣಲೆಯಲ್ಲಿ ಎಣ್ಣೆಯನ್ನು ಸುರಿದು ಬಿಸಿಮಾಡಿ. ಎಣ್ಣೆ ಹುರಿಯಲು ಸಾಕಷ್ಟು ಬಿಸಿಯಾದ ಬಳಿಕ ಉರಿಯನ್ನು ಮಧ್ಯಮಕ್ಕಿಳಿಸಿ ಇದರಲ್ಲಿ ಕೋಳಿ ಮಾಂಸದ ತುಂಡುಗಳನ್ನು ನಿಧಾನವಾಗಿ ಇಳಿಬಿಟ್ಟು ಹುರಿಯಿರಿ. ನಡುನಡುವೆ ತಿರುವುತ್ತಾ ಎಲ್ಲಾ ಬದಿಗಳು ಚೆನ್ನಾಗಿ ಹುರಿದ ಬಳಿಕ ಎಣ್ಣೆಯಿಂದ ಹೊರತೆಗೆದು ಎಣ್ಣೆಯನ್ನು ಬಸಿಯಿರಿ. ಬಳಿಕ ಬಿಳಿ ಹೀರುಕಾಗದದ ಮೇಲೆ ಹರಡಿ ಎಣ್ಣೆಯನ್ನು ಹೀರಿಕೊಳ್ಳುವಂತೆ ಮಾಡಿ.

ಬಳಿಕ ಇನ್ನೊಂದು ಚಿಕ್ಕ ಪಾತ್ರೆಯಲ್ಲಿ ಎರಡು ದೊಡ್ಡಚಮಚ ಎಣ್ಣೆ ಹಾಕಿ ಬಿಸಿಮಾಡಿ. ಇದರಲ್ಲಿ ಈರುಳ್ಳಿ ಹಾಕಿ ಕಂದು ಬಣ್ಣ ಬರುವವರೆಗೆ ಬಾಡಿಸಿ. ಬಳಿಕ ಹಸಿಮೆಣಸು ಹಾಕಿ ಮೃದುವಾಗುವವರೆಗೆ ತಿರುವಿ.

ಇದಕ್ಕೆ ಸೋಯಾ ಸಾಸ್, ಶಿರ್ಕಾ ಹಾಗೂ ಹುರಿದಿಟ್ಟ ಕೋಳಿಮಾಂಸದ ತುಂಡುಗಳನ್ನು ಹಾಕಿ ಚೆನ್ನಾಗಿ ಮಿಶ್ರಣ ಮಾಡಿ.

ಒಂದು ವೇಳೆ ನಿಮಗೆ ರೊಟ್ಟಿಯೊಡನೆ ನಂಜಿಕೊಳ್ಳಲು ಆಗುವಂತೆ ಇರಬೇಕಿದ್ದರೆ ಕೊಂಚ ಹೆಚ್ಚು ನೀರು ಬೆರೆಸಿ ನಡುನಡುವೆ ತಿರುವುತ್ತಾ ಒಂದೆರಡು ನಿಮಿಷ ಕುದಿಸಿ. ಬಿಸಿ ಬಿಸಿ ಇರುವಂತೆಯೇ ಬಡಿಸಿ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

40 minutes ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

51 minutes ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

57 minutes ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

1 hour ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

2 hours ago