ಸುಳ್ಯ : ಸುಳ್ಯದಲ್ಲಿ ಮನೆಮಾತಾಗಿದ್ದ ಅವಿನಾಶ್ ಮೋಟಾರ್ಸ್ ನ ಮಾಲಕ ನಾರಾಯಣ ರೈ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಾನಸಿಕವಾಗಿ ತೀವ್ರ ನೊಂದಿದ್ದರು ಎಂದು ಹೇಳಲಾಗಿದ್ದು, ಈ ಹಿನ್ನಲೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ದೇಹದ ಹತ್ತಿರ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಅಸೌಖ್ಯದ ಹಿನ್ನಲೆಯಲ್ಲಿ ತನಗೆ ಬದುಕಲು ಕಷ್ಟವಾಗುತ್ತಿದೆ, ಮನೆಯವರಿಗೂ ಕಷ್ಟ ಕೊಡಲು ಮನಸ್ಸಿಲ್ಲ, ಹೀಗಾಗಿ ನಿಮ್ಮನ್ನೆಲ್ಲಾ ಬಿಟ್ಟು ಹೋಗುತ್ತಿದ್ದೇನೆ ಎಂದು ಅವರು ಅದರಲ್ಲಿ ದಾಖಲಿಸಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ ತನ್ನ ಮರಣದ ಕಾರಣದಿಂದ ಬಸ್ಗಳ ಓಡಾಟವನ್ನು ನಿಲ್ಲಿಸಬಾರದು. ಕಪ್ಪು ಫ್ಲ್ಯಾಗ್ ಹಾಕಿ ಬಸ್ ಓಡಿಸಬೇಕು ಎಂದೂ ಅದರಲ್ಲಿ ಉಲ್ಲೇಖಿಸಿದ್ದಾರೆಂದು ತಿಳಿದುಬಂದಿದೆ.
80ರ ದಶಕದಲ್ಲಿ ಸುಳ್ಯದಂತಹ ಗ್ರಾಮೀಣ ಪ್ರದೇಶದಲ್ಲಿ ಬಸ್ ಸೌಕರ್ಯ ಕಲ್ಪಿಸಿ ಸಾವಿರಾರು ಜನರು ತಮ್ಮ ದೈನಂದಿನ ಕೆಲಸ ನಿರ್ವಹಿಸಲು ಅವಕಾಶ ಮಾಡಿದ್ದರು. ಈಗಲೂ ಸುಳ್ಯ ಪರಿಸರದ ಹಲವು ಮಾರ್ಗಗಳಲ್ಲಿ ಬಸ್ ಸಂಚಾರ ನಡೆಸುತ್ತಿದೆ.
ಥಾಣೆ: ವ್ಯಾನ್ ಹಾಗೂ ಸಿಮೆಂಟ್ ಮಿಕ್ಸರ್ ನಡುವೆಭೀಕರ ರಸ್ತೆ ಅಪಘಾತ : 11 ಮಂದಿ ಸಾವು ಥಾಣೆ: ವ್ಯಾನ್ ಹಾಗೂ…
ಮತ್ಸ್ಯಕ್ಷಾಮ: ಮಂಗಳೂರಿನಲ್ಲಿ ಮೀನುಗಾರಿಕೆ ನಿಲ್ಲಿಸಿದ ಶೇ.85ರಷ್ಟು ಬೋಟುಗಳು ಮೀನುಗಳ ಕೊರತೆಯಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಕರಾವಳಿಯ ಮೀನುಗಾರರು ಮಂಗಳೂರು(ದಕ್ಷಿಣ ಕನ್ನಡ):…
ಹಿರಿಯ ಶಾಸಕರು ಸಚಿವ ಸ್ಥಾನ ಕೇಳೋದ್ರಲ್ಲಿ ತಪ್ಪಿಲ್ಲ : ಪರಮೇಶ್ವರ್ ಬೆಂಗಳೂರು: ಅದೇನು ಗ್ಯಾಂಬ್ಲಿಂಗ್ ಅಲ್ಲ, ಹಿರಿಯ ಶಾಸಕರು ಸಚಿವ…
ಕಾರ್ಕಳ : ಭಗವಾನ್ ಬಾಹುಬಲಿಯ ಮಹಾಮಸ್ತಕಾಭಿಷೇಕಕ್ಕೆ ಸಿದ್ಧತೆ: ಡಾ.ಎಂ.ಎನ್.ರಾಜೇಂದ್ರಕುಮಾರ್ 82.37 ಕೋಟಿ ರೂ.ನೆರವಿಗೆ ಸರಕಾರಕ್ಕೆ ಮನವಿ: ಡಾ.ಎಂಎನ್ಆರ್ ಕಾರ್ಕಳ: ಕಾರ್ಕಳದ…
ಮೂಡುಬಿದಿರೆ: ಅಕ್ರಮ ಜಾನುವಾರು ಸಾಗಾಟ ಪತ್ತೆ; ಎಂಟು ದನಗಳ ರಕ್ಷಣೆ, ಎರಡು ವಾಹನ ವಶ ಮೂಡುಬಿದಿರೆ: ಅತ್ಯಂತ ಹಿಂಸಾತ್ಮಕವಾಗಿ ಹಾಗೂ…
ರಾಜ್ಯದ ಹಲವೆಡೆ ಇಂದು, ನಾಳೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ : ಹವಾಮಾನ ಇಲಾಖೆ ಬೆಂಗಳೂರು: ರಾಜ್ಯದ ಹಲವೆಡೆ ಇಂದು…