ಸುಳ್ಯ : ಸುಳ್ಯದಲ್ಲಿ ಮನೆಮಾತಾಗಿದ್ದ ಅವಿನಾಶ್ ಮೋಟಾರ್ಸ್ ನ ಮಾಲಕ ನಾರಾಯಣ ರೈ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಾನಸಿಕವಾಗಿ ತೀವ್ರ ನೊಂದಿದ್ದರು ಎಂದು ಹೇಳಲಾಗಿದ್ದು, ಈ ಹಿನ್ನಲೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ದೇಹದ ಹತ್ತಿರ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಅಸೌಖ್ಯದ ಹಿನ್ನಲೆಯಲ್ಲಿ ತನಗೆ ಬದುಕಲು ಕಷ್ಟವಾಗುತ್ತಿದೆ, ಮನೆಯವರಿಗೂ ಕಷ್ಟ ಕೊಡಲು ಮನಸ್ಸಿಲ್ಲ, ಹೀಗಾಗಿ ನಿಮ್ಮನ್ನೆಲ್ಲಾ ಬಿಟ್ಟು ಹೋಗುತ್ತಿದ್ದೇನೆ ಎಂದು ಅವರು ಅದರಲ್ಲಿ ದಾಖಲಿಸಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ ತನ್ನ ಮರಣದ ಕಾರಣದಿಂದ ಬಸ್ಗಳ ಓಡಾಟವನ್ನು ನಿಲ್ಲಿಸಬಾರದು. ಕಪ್ಪು ಫ್ಲ್ಯಾಗ್ ಹಾಕಿ ಬಸ್ ಓಡಿಸಬೇಕು ಎಂದೂ ಅದರಲ್ಲಿ ಉಲ್ಲೇಖಿಸಿದ್ದಾರೆಂದು ತಿಳಿದುಬಂದಿದೆ.
80ರ ದಶಕದಲ್ಲಿ ಸುಳ್ಯದಂತಹ ಗ್ರಾಮೀಣ ಪ್ರದೇಶದಲ್ಲಿ ಬಸ್ ಸೌಕರ್ಯ ಕಲ್ಪಿಸಿ ಸಾವಿರಾರು ಜನರು ತಮ್ಮ ದೈನಂದಿನ ಕೆಲಸ ನಿರ್ವಹಿಸಲು ಅವಕಾಶ ಮಾಡಿದ್ದರು. ಈಗಲೂ ಸುಳ್ಯ ಪರಿಸರದ ಹಲವು ಮಾರ್ಗಗಳಲ್ಲಿ ಬಸ್ ಸಂಚಾರ ನಡೆಸುತ್ತಿದೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…