ಸುಳ್ಯ : ಸುಳ್ಯದಲ್ಲಿ ಮನೆಮಾತಾಗಿದ್ದ ಅವಿನಾಶ್ ಮೋಟಾರ್ಸ್ ನ ಮಾಲಕ ನಾರಾಯಣ ರೈ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಾನಸಿಕವಾಗಿ ತೀವ್ರ ನೊಂದಿದ್ದರು ಎಂದು ಹೇಳಲಾಗಿದ್ದು, ಈ ಹಿನ್ನಲೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೃತ ದೇಹದ ಹತ್ತಿರ ಡೆತ್ ನೋಟ್ ಸಿಕ್ಕಿದ್ದು, ಅದರಲ್ಲಿ ಅಸೌಖ್ಯದ ಹಿನ್ನಲೆಯಲ್ಲಿ ತನಗೆ ಬದುಕಲು ಕಷ್ಟವಾಗುತ್ತಿದೆ, ಮನೆಯವರಿಗೂ ಕಷ್ಟ ಕೊಡಲು ಮನಸ್ಸಿಲ್ಲ, ಹೀಗಾಗಿ ನಿಮ್ಮನ್ನೆಲ್ಲಾ ಬಿಟ್ಟು ಹೋಗುತ್ತಿದ್ದೇನೆ ಎಂದು ಅವರು ಅದರಲ್ಲಿ ದಾಖಲಿಸಿದ್ದಾರೆಂದು ತಿಳಿದುಬಂದಿದೆ. ಅಲ್ಲದೆ ತನ್ನ ಮರಣದ ಕಾರಣದಿಂದ ಬಸ್ಗಳ ಓಡಾಟವನ್ನು ನಿಲ್ಲಿಸಬಾರದು. ಕಪ್ಪು ಫ್ಲ್ಯಾಗ್ ಹಾಕಿ ಬಸ್ ಓಡಿಸಬೇಕು ಎಂದೂ ಅದರಲ್ಲಿ ಉಲ್ಲೇಖಿಸಿದ್ದಾರೆಂದು ತಿಳಿದುಬಂದಿದೆ.
80ರ ದಶಕದಲ್ಲಿ ಸುಳ್ಯದಂತಹ ಗ್ರಾಮೀಣ ಪ್ರದೇಶದಲ್ಲಿ ಬಸ್ ಸೌಕರ್ಯ ಕಲ್ಪಿಸಿ ಸಾವಿರಾರು ಜನರು ತಮ್ಮ ದೈನಂದಿನ ಕೆಲಸ ನಿರ್ವಹಿಸಲು ಅವಕಾಶ ಮಾಡಿದ್ದರು. ಈಗಲೂ ಸುಳ್ಯ ಪರಿಸರದ ಹಲವು ಮಾರ್ಗಗಳಲ್ಲಿ ಬಸ್ ಸಂಚಾರ ನಡೆಸುತ್ತಿದೆ.
ಉಡುಪಿ: ಮನೆಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ ವಿದೇಶಿ ಕರೆನ್ಸಿ ಸಹಿತ 23.56 ಲಕ್ಷ ರೂ.ಮೌಲ್ಯದ ಸೊತ್ತು ವಶ ಉಡುಪಿ:…
ನಿಮ್ಮ ಜೊತೆ ನಾವಿದ್ದೇವೆ, ಧೈರ್ಯವಾಗಿರಿ: ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸಿಎಂ ಡಿ.ಕೆ.ಶಿವಕುಮಾರ್ ಅಭಯ ಹೊಸದಿಲ್ಲಿ: "ಧೈರ್ಯವಾಗಿರಿ. ಸುರಕ್ಷಿತ ಸ್ಥಳದಲ್ಲಿ ಇರುವುದರಿಂದ…
ಕರ್ನಾಟಕದಲ್ಲಿ ಹೆಚ್ಚುತ್ತಿರುವ H1N1 ಪ್ರಕರಣ : ಆತಂಕ ಬೇಡ ಎಂದ ಆರೋಗ್ಯ ಇಲಾಖೆ ಬೆಂಗಳೂರು: ಕರ್ನಾಟಕದಲ್ಲಿ H1N1 ಹಾಗೂ ಇನ್ಫ್ಲುಯೆನ್ಸ…
ಮೈಸೂರಿನಲ್ಲಿ ಕಂಬಳಕ್ಕೆ ಸಿದ್ಧತೆ : ಟ್ರ್ಯಾಕ್ ನಿರ್ಮಾಣ ಕಾಮಗಾರಿಗೆ ಶಾಸಕ ಅಶೋಕ್ ಕುಮಾರ್ ರೈ ಚಾಲನೆ ಮೈಸೂರು: ಸಾತಗಳ್ಳಿ ಪ್ರದೇಶದಲ್ಲಿ…
ನೇಪಾಳ ಭೀಕರ ಪ್ರವಾಹ : 5 ಲಕ್ಷ ಡಾಲರ್ಗಳ ತುರ್ತು ನೆರವು ಘೋಷಿಸಿದ ಅಮೆರಿಕ ಕಠ್ಮಂಡು: ನೇಪಾಳದ ಭೋಟೆ ಕೋಶಿ…
ಮಂಗಳೂರು ನೈಋತ್ಯ ವಲಯ ಸೇರ್ಪಡೆ ; ಶೀಘ್ರ ಸಂಭ್ರಮೋತ್ಸವ: ಸತೀಶ್ ಕುಂಪಲ ಮಂಗಳೂರು : ರೈಲ್ವೇ ಪ್ರದೇಶವನ್ನು ನೈಋತ್ಯ ವಲಯಕ್ಕೆ…