ಸುಳ್ಯ: ಸುಳ್ಯ ಮತ್ತು ಕೊಡಗು ಗಡಿ ಭಾಗದ ಕೆಲವಡೆ ಇಂದು ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ದೊಡ್ಡ ಶಬ್ದದೊಂದಿಗೆ ಭೂಮಿ ಕಂಪಿಸಿರುವುದು ಅನುಭವಕ್ಕೆ ಬಂದಿರುವುದಾಗಿ ಜನ ಹೇಳಿಕೊಂಡಿದ್ದಾರೆ.
ಕೊಡಗು-ಸುಳ್ಯ ಗಡಿ ಪ್ರದೇಶವಾದ ಚೆಂಬು, ಸಂಪಾಜೆ, ಗೂನಡ್ಕ, ಅರಂತೋಡು, ತೊಡಿಕಾನ ಮುಂತಾದೆಡೆ ಭೂ ಕಂಪನದ ಅನುಭವವಾಗಿದೆ. ಬೆಳಗ್ಗೆ 10.09ರ ವೇಳೆಗೆ ಭೂಮಿಯ ಒಳಗಿನಿಂದ ಭಾರೀ ಶಬ್ದ ಕೇಳಿಸಿದ್ದು, ಸೋಫಾ, ಮಂಚ, ಪಾತ್ರೆ, ಪರಿಕರಗಳು ಅಲುಗಾಡಿವೆ ಎಂಬುದಾಗಿ ಜನರು ಮಾಹಿತಿ ನೀಡಿದ್ದಾರೆ. ವಾಹನದಲ್ಲಿ ಸಂಚರಿಸುತ್ತಿದ್ದವರಿಗೂ ಗುಂಡಿಗೆ ಬಿದ್ದಂತ ಅನುಭವ ಉಂಟಾಗಿದೆ.
ಕಳೆದೊಂದು ತಿಂಗಳಿನಿಂದೀಚೆಗೆ ಈ ಭಾಗಗಳಲ್ಲಿ ಹತ್ತಕ್ಕೂ ಹೆಚ್ಚು ಭಾರಿ ಭೂಕಂಪನದ ಅನುಭವವಾಗಿದ್ದು, ಭಾರೀ ಶಬ್ದದಿಂದ ಕೂಡಿದ ಕಂಪನಕ್ಕೆ ಜನ ಭಯದಿಂದಲೇ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೆಚ್ಚಾಗಿ ಎತ್ತರದ ಗುಡ್ಡ ಪ್ರದೇಶಗಳಲ್ಲಿ, ಗುಡ್ಡದ ಅಡಿಭಾಗಗಳಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿರುವ ಜನರಿಗೆ ಭೂಕಂಪನ ಮತ್ತು ಧಾರಾಕಾರ ಮಳೆಯಿಂದಾಗಿ ಗುಡ್ಡ ಕುಸಿತದ ಭೀತಿಯೂ ಎದುರಾಗಿದ್ದು, ಪ್ರತಿದಿನ ಇದೇ ಆತಂಕದಲ್ಲಿ ದಿನ ಕಳೆಯಬೇಕಾಗಿ ಬಂದಿದೆ ಎನ್ನುತ್ತಾರೆ ಈ ಭಾಗದ ನಿವಾಸಿಗಳು.
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…