ಸುಳ್ಯ: ಸುಳ್ಯ ಮತ್ತು ಕೊಡಗು ಗಡಿ ಭಾಗದ ಕೆಲವಡೆ ಇಂದು ಮತ್ತೆ ಭೂಮಿ ಕಂಪಿಸಿದ ಅನುಭವವಾಗಿದೆ. ದೊಡ್ಡ ಶಬ್ದದೊಂದಿಗೆ ಭೂಮಿ ಕಂಪಿಸಿರುವುದು ಅನುಭವಕ್ಕೆ ಬಂದಿರುವುದಾಗಿ ಜನ ಹೇಳಿಕೊಂಡಿದ್ದಾರೆ.
ಕೊಡಗು-ಸುಳ್ಯ ಗಡಿ ಪ್ರದೇಶವಾದ ಚೆಂಬು, ಸಂಪಾಜೆ, ಗೂನಡ್ಕ, ಅರಂತೋಡು, ತೊಡಿಕಾನ ಮುಂತಾದೆಡೆ ಭೂ ಕಂಪನದ ಅನುಭವವಾಗಿದೆ. ಬೆಳಗ್ಗೆ 10.09ರ ವೇಳೆಗೆ ಭೂಮಿಯ ಒಳಗಿನಿಂದ ಭಾರೀ ಶಬ್ದ ಕೇಳಿಸಿದ್ದು, ಸೋಫಾ, ಮಂಚ, ಪಾತ್ರೆ, ಪರಿಕರಗಳು ಅಲುಗಾಡಿವೆ ಎಂಬುದಾಗಿ ಜನರು ಮಾಹಿತಿ ನೀಡಿದ್ದಾರೆ. ವಾಹನದಲ್ಲಿ ಸಂಚರಿಸುತ್ತಿದ್ದವರಿಗೂ ಗುಂಡಿಗೆ ಬಿದ್ದಂತ ಅನುಭವ ಉಂಟಾಗಿದೆ.
ಕಳೆದೊಂದು ತಿಂಗಳಿನಿಂದೀಚೆಗೆ ಈ ಭಾಗಗಳಲ್ಲಿ ಹತ್ತಕ್ಕೂ ಹೆಚ್ಚು ಭಾರಿ ಭೂಕಂಪನದ ಅನುಭವವಾಗಿದ್ದು, ಭಾರೀ ಶಬ್ದದಿಂದ ಕೂಡಿದ ಕಂಪನಕ್ಕೆ ಜನ ಭಯದಿಂದಲೇ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ. ಹೆಚ್ಚಾಗಿ ಎತ್ತರದ ಗುಡ್ಡ ಪ್ರದೇಶಗಳಲ್ಲಿ, ಗುಡ್ಡದ ಅಡಿಭಾಗಗಳಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿರುವ ಜನರಿಗೆ ಭೂಕಂಪನ ಮತ್ತು ಧಾರಾಕಾರ ಮಳೆಯಿಂದಾಗಿ ಗುಡ್ಡ ಕುಸಿತದ ಭೀತಿಯೂ ಎದುರಾಗಿದ್ದು, ಪ್ರತಿದಿನ ಇದೇ ಆತಂಕದಲ್ಲಿ ದಿನ ಕಳೆಯಬೇಕಾಗಿ ಬಂದಿದೆ ಎನ್ನುತ್ತಾರೆ ಈ ಭಾಗದ ನಿವಾಸಿಗಳು.
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…