Featured

ಸುಳ್ಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಿ ಇಲ್ಲವೇ ನಂದಕುಮಾರ್ ಅವರನ್ನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತೇವೆ :ಅಭಿಮಾನಿ ಬಳಗ – Vishwanews24

ಸುಳ್ಯ ಕಾಂಗ್ರೆಸ್ ಅಭ್ಯರ್ಥಿಯನ್ನು ಬದಲಾಯಿಸಿ ಇಲ್ಲವೇ ನಂದಕುಮಾರ್ ಅವರನ್ನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಸುತ್ತೇವೆ :ಅಭಿಮಾನಿ ಬಳಗ

ಎಚ್.ಎಂ. ದಕ್ಷಿಣ ಕನ್ನಡದ ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ನಂದಕುಮಾರ್ ಅವರು ಭಾನುವಾರ ನಡೆದ ಸಾರ್ವಜನಿಕ ಸಭೆಯಲ್ಲಿ ಪಕ್ಷವು ಬಿ ಫಾರಂ ನೀಡಲು ನಿರಾಕರಿಸಿದರೆ ಅವರನ್ನು ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಿದ್ದಾರೆ.

ಸುಳ್ಯ: ನಂದ ಕುಮಾರ್‌ ಅಭಿಮಾನಿಗಳು ಸಲ್ಲಿಸಿರುವ ಬೇಡಿಕೆಗಳಿಗೆ ಕಾಂಗ್ರೆಸ್‌ ನಾಯಕರು ಯಾವುದೇ ರೀತಿಯಲ್ಲಿ ಸ್ಪಂದನೆ ನೀಡದೆ ಇದ್ದಲ್ಲಿ ಅಥವಾ ಸುಳ್ಯದಿಂದ ಕಾಂಗ್ರೆಸ್‌ ಅಭ್ಯರ್ಥಿಯಾಗಿ ನಂದ ಕುಮಾರ್‌ ಅವರಿಗೆ ಬಿ ಫಾರಂ ನೀಡದೆ ಇದ್ದಲ್ಲಿ ಅವರನ್ನು ಪಕ್ಷೇತರವಾಗಿ ಕಣಕ್ಕಿಳಿಸಲಾಗುವುದು ಎಂದು ಅವರ ಅಭಿಮಾನಿಗಳು ನಿರ್ಧಾರ ಕೈಗೊಂಡಿದ್ದಾರೆ.

ನಿಂತಿಕಲ್ಲಿನಲ್ಲಿ ರವಿವಾರ ನಡೆದ ನಂದ ಕುಮಾರ್‌ ಅಭಿಮಾನಿ ಬಳಗದ ಸಮಾವೇಶದಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಬಿ ಫಾರಂ ಕೊಡುವ ಮೊದಲು ಅಭ್ಯರ್ಥಿ ಬದಲಾಯಿಸಿ ನಂದ ಕುಮಾರ್‌ ಅವರಿಗೆ ನೀಡಬೇಕು. ಒಂದೇ ವೇಳೆ ಬೇಡಿಕೆ ಈಡೇರಿಸದಿದ್ದರೆ ನಂದ ಕುಮಾರ್‌ ಅವರನ್ನು ಪಕ್ಷೇತರವಾಗಿ ಕಣಕ್ಕಿಳಿಸುವಂತೆ ಸಮಾವೇಶದಲ್ಲಿದ್ದ ಕಾರ್ಯಕರ್ತರು ಒಕ್ಕೊರಲಿನಿಂದ ಚಪ್ಪಾಳೆ ತಟ್ಟಿ, ಘೋಷಣೆ ಕೂಗಿ ಆಗ್ರಹಿಸಿದರು.

ಕಾಂಗ್ರೆಸ್‌ನಿಂದ ಈಗಾಗಲೇ ಸುಳ್ಯ ವಿಧಾನಸಭಾ ಕ್ಷೇತ್ರದಿಂದ ಜಿ. ಕೃಷ್ಣಪ್ಪ ಅವರಿಗೆ ಟಿಕೆಟ್‌ ನೀಡಲಾಗಿದೆ.

ಈ ಮಧ್ಯೆ, ವಿಧಾನ ಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ ಅವರು ಕಡಬದಲ್ಲಿ ಪತ್ರಕರ್ತರ ಜತೆ ಮಾತನಾಡಿ, ಸಮಸ್ಯೆ ಯನ್ನು ಬಗೆಹರಿಸಲಾಗುತ್ತಿದೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು ನಂದ ಕುಮಾರ್‌ ಜತೆ ಮಾತನಾಡಿದ್ದಾರೆ. ಟಿಕೆಟ್‌ ಕುರಿತಾಗಿ ಗೊಂದಲ ಇಲ್ಲ ಎಂದಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

5 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

11 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

12 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

13 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

13 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

13 hours ago