ಸುಳ್ಯ : ಕಾರು ಹಾಗೂ ಸ್ಕೂಟರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸ್ಕೂಟಿಯಲ್ಲಿದ್ದ ಅಣ್ಣ ತಂಗಿ ಸಾವನಪ್ಪಿರುವ ಘಟನೆ ಸುಬ್ರಹ್ಮಣ್ಯ – ಜಾಲ್ಸೂರು ರಾಜ್ಯ ಹೆದ್ದಾರಿಯ ಸುಳ್ಯ ತಾಲೂಕಿನ ಎಲಿಮಲೆ ಸಮೀಪ ಸಂಭವಿಸಿದೆ.
ಮೃತರನ್ನು ಕಡಪಾಲ ಬಾಜಿನಡ್ಕ ದೇವಿದಾಸ್ ಎಂಬವರ ಪುತ್ರ ನಿಶಾಂತ್ ಮತ್ತು ಆತನ ಸಹೋದರಿ ಮೋಕ್ಷಾ ಎಂದು ಗುರುತಿಸಲಾಗಿದೆ. ಇಂದು ಮಧ್ಯಾಹ್ನ ಎಲಿಮಲೆ ಮತ್ತು ಜಬಳೆ ಮಧ್ಯೆ ಈ ಅಪಘಾತ ಸಂಭವಿಸಿದ್ದು, ಮಾರುತಿ ಕಾರು ಹಾಗೂ ಸ್ಕೂಟಿ ನಡುವೆ ಪರಸ್ಪರ ಡಿಕ್ಕಿ ಸಂಭವಿಸಿದೆ.
ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸ್ಕೂಟಿ ಸವಾರ ನಿಶಾಂತ್ ಹಾಗೂ ಆತನ ಸಹೋದರಿ ಮೋಕ್ಷಾರನ್ನು ಸ್ಥಳೀಯರು ತಕ್ಷಣವೇ ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆತಂದಿದ್ದರು. ಆಸ್ಪತ್ರೆಗೆ ತಲುಪುವ ವೇಳೆ ನಿಶಾಂತ್ ಸಾವನ್ನಪ್ಪಿದ್ದರೆ, ಆತನ ತಂಗಿ ಮೋಕ್ಷಾಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯುವ ಸಂದರ್ಭದಲ್ಲಿ ಆಕೆಯೂ ಸಾವನ್ನಪ್ಪಿದಳೆಂದು ತಿಳಿದು ಬಂದಿದೆ.
ಮೃತ ನಿಶಾಂತ್ ಸುಳ್ಯ ಜೂನಿಯರ್ ಕಾಲೇಜಿನ ವಿದ್ಯಾರ್ಥಿಯಾಗಿದ್ದು, ಮೋಕ್ಷಾ ದೇವಚಳ್ಳ ಸ.ಮಾ.ಹಿ.ಪ್ರಾ. ಶಾಲೆಯ 5ನೇ ತರಗತಿ ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ.
ಉಡುಪಿ: ಬಂದೂಕು, ಚಾಕುಗಳಿಗೆ ಆಯುಧಪೂಜೆ ನೆರವೇರಿಸಿದ ಪ್ರಮೋದ್ ಮುತಾಲಿಕ್ – Vishwanews24
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…
ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…