ಸುಳ್ಯ: ಕಾಲು ಜಾರಿ ಹೊಳೆಗೆ ಬಿದ್ದ ವ್ಯಕ್ತಿ ಸಾವು – vishwanews24

Featured, ದಕ್ಷಿಣ ಕನ್ನಡ

ಸುಳ್ಯ: ಕಾಲು ಜಾರಿ ಹೊಳೆಗೆ ಬಿದ್ದ ವ್ಯಕ್ತಿ ಸಾವು

ಸುಳ್ಯ: ಕಾಲು ಜಾರಿ ಹೊಳೆಗೆ ಬಿದ್ದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಇಂದು ಬೆಳಗ್ಗೆ ಅರಂತೋಡು ಗ್ರಾಮದ ಬಾಜಿನಡ್ಕದಲ್ಲಿ ಸಂಭವಿಸಿದೆ.

ಬಾಜಿನಡ್ಕದ ಚನಿಯ(50) ಮೃತ ದುರ್ದೈವಿ.

ಚನಿಯ ಅವರು ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಮನೆ ಸಮೀಪದ ಹೊಳೆಗೆ ಹೋಗಿದ್ದಾರೆ. ಈ ವೇಳೆ ಹೊಳೆಗೆ ಕಾಲು ಜಾರಿ ಬಿದ್ದಿದ್ದಾರೆ. ಚನಿಯ ಅವರು ಹೊಳೆಗೆ ಬಿದ್ದಿದ್ದನ್ನು ಕಂಡ ಮನೆಯವರು ಬೊಬ್ಬೆ ಹಾಕಿದಾಗ ಹತ್ತಿರ ಇರುವ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಮನ್ಸ ಮುಗೇರರವರು ಓಡಿಬಂದು ನೀರಿಗಿಳಿದು ಚನಿಯರವರನ್ನು ನೀರಿನಿಂದ ಮೇಲೆತ್ತಿದ್ದದರಾದರೂ, ಅವರು ಆಗಲೇ ಮೃತಪಟ್ಟಿದ್ದರೆಂದು ತಿಳಿದುಬಂದಿದೆ.

ಆಗುಂಬೆ ಘಾಟಿಯಲ್ಲಿ ಸೆ. 15ರವರೆಗೆ ಭಾರಿ ವಾಹನಗಳ ಸಂಚಾರ ನಿಷೇಧ – vishwanews24

ಬಳಿಕ ಅರಂತೋಡು ಸಹಕಾರಿ ಸಂಘದ ಆಂಬುಲೆನ್ಸ್ನಲ್ಲಿ ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ಕರೆತರಲಾಯಿತು ಎಂದು ತಿಳಿದುಬಂದಿದೆ. ಮೃತರು ಪತ್ನಿ, ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

Leave a Reply