Featured

ಸುಳ್ಯ : ಚೆನ್ನಕೇಶವ ದೇವಸ್ಥಾನ ಜಾತ್ರೆಗೆ ಅನ್ಯಧರ್ಮೀಯರಿಗೆ ವ್ಯಾಪಾರ ನಿರ್ಬಂಧ : ತುರ್ತು ಸಭೆಯಲ್ಲಿ ನಿರ್ಧಾರ – Vishwanews24

ಸುಳ್ಯ ಚೆನ್ನಕೇಶವ ದೇವಸ್ಥಾನ ಜಾತ್ರೆಗೆ ಅನ್ಯಧರ್ಮೀಯರಿಗೆ ವ್ಯಾಪಾರ ನಿರ್ಬಂಧ : ತುರ್ತು ಸಭೆಯಲ್ಲಿ ನಿರ್ಧಾರ

ಸುಳ್ಯ : ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಸಂದರ್ಭದಲ್ಲಿ ಸಂತೆ ವ್ಯಾಪಾರ ನಡೆಸಲು ಈ ಹಿಂದ ಅನ್ಯಧರ್ಮೀಯರಿಗೆ ಅವಕಾಶ ನೀಡಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು, ಆದರೆ ನಿನ್ನ ಸಂಜೆ ನಡೆದ ಜೀರ್ಣೋದ್ಧಾರ ಮತ್ತು ಪುಮುಖರ ತುರ್ತು ಸಭೆಯಲ್ಲಿ ಅನ್ಯ ಧರ್ಮೀಯರಿಗೆ ವ್ಯಾಪಾರ ನಡೆಸಲು ಅವಕಾಶ ನೀಡದಂತ ನಿರ್ಧಾರ ಕೈಗೊಳ್ಳಲಾಗಿದೆ.

ದೇವಸ್ಥಾನದ ವತಿಯಿಂದ ಸಂತೆ ವ್ಯಾಪಾರ ನಡೆಸಲು ಏಲಂ ಮಾಡುವ ಸ್ಥಳದಲ್ಲಿ ಹಿಂದುಯೇತರರಿಗೆ ಅವಕಾಶ ನೀಡುವುದಿಲ್ಲ, ಸಂತೆಯಲ್ಲಿ ವ್ಯಾಪಾರ ನಡೆಸಲು ಹಿಂದುಗಳಿಗೆ ಮಾತ್ರ ಅವಕಾಶ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಸಂತೆಯಲ್ಲಿ ಈ ಹಿಂದಿನಂತೆ ಮುಕ್ತ ಅವಕಾಶ ನೀಡಲು ಈ ಹಿಂದಿನ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಸಂತೆ ವ್ಯಾಪಾರಕ್ಕೆ ಎಲ್ಲರಿಗೂ ಮುಕ್ತ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಹಿಂದುತ್ವ ಸಂಘಟನೆಗಳು ಸುಳ್ಯ ತಾಲೂಕು ಹಿಂದೂ ಹಿತ ರಕ್ಷಣಾ ವೇದಿಕೆಯನ್ನು ರಚಿಸಿ ದೇವಸ್ಥಾನಕ್ಕೆ, ಜೀರ್ಣೋದ್ಘಾರ ಸಮಿತಿ ಅಧ್ಯಕ್ಷರಿಗೆ, ತಾಲೂಕು ಆಡಳಿತ, ಪೊಲೀಸ್ ಇಲಾಖೆಗೆ ಹಾಗು ಧಾರ್ಮಿಕ ದತ್ತಿ ಇಲಾಖೆಗೆ ಮನವಿ ನೀಡಿದರು.

ಈ ಹಿನ್ನಲೆಯಲ್ಲಿ ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ.ಕ.ವಿ.ಚಿದಾನಂದ ಅವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಡಾ.ಹರಪುಸಾದ್ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಸದಸ್ಯರಾದ ಎಂ.ಮೀನಾಕ್ಷಿ ಗೌಡ, ಲಿಂಗಪ್ಪ ಗೌಡ ಕೇರ್ವಳ, ಕೃಪಾಶಂಕರ ತುದಿಯಡ್ಕ, ನ.ಪಂ.ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಹಿಂದೂ ಹಿತ ರಕ್ಷಣಾ ವೇದಿಕೆಯ ಸಂಚಾಲಕ ಚಿದಾನಂದ ವಿದ್ಯಾನಗರ, ಕೇಶವ ನಾಯಕ್ ಸುಳ್ಯ, ಸುನಿಲ್ ಕೇರ್ಪಳ,ನಿಕೇಶ್ ಉಬರಡ್ಕ, ಜಿ.ಜಿ.ನಾಯಕ್, ಗೋಪಾಲಕೃಷ್ಣ, ಲತೀಶ್ ಗುಂಡ, ಗಿರೀಶ್ ಕಲ್ಲುಗದ್ದ, ರಜತ್ ಅಡ್ಯಾರ್‌ ಮತ್ತಿತರರು ಇದ್ದರು.

 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

1 day ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

1 day ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago