ಸುಳ್ಯ : ಶ್ರೀ ಚೆನ್ನಕೇಶವ ದೇವಸ್ಥಾನದ ಜಾತ್ರೋತ್ಸವದ ಸಂದರ್ಭದಲ್ಲಿ ಸಂತೆ ವ್ಯಾಪಾರ ನಡೆಸಲು ಈ ಹಿಂದ ಅನ್ಯಧರ್ಮೀಯರಿಗೆ ಅವಕಾಶ ನೀಡಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿತ್ತು, ಆದರೆ ನಿನ್ನ ಸಂಜೆ ನಡೆದ ಜೀರ್ಣೋದ್ಧಾರ ಮತ್ತು ಪುಮುಖರ ತುರ್ತು ಸಭೆಯಲ್ಲಿ ಅನ್ಯ ಧರ್ಮೀಯರಿಗೆ ವ್ಯಾಪಾರ ನಡೆಸಲು ಅವಕಾಶ ನೀಡದಂತ ನಿರ್ಧಾರ ಕೈಗೊಳ್ಳಲಾಗಿದೆ.
ದೇವಸ್ಥಾನದ ವತಿಯಿಂದ ಸಂತೆ ವ್ಯಾಪಾರ ನಡೆಸಲು ಏಲಂ ಮಾಡುವ ಸ್ಥಳದಲ್ಲಿ ಹಿಂದುಯೇತರರಿಗೆ ಅವಕಾಶ ನೀಡುವುದಿಲ್ಲ, ಸಂತೆಯಲ್ಲಿ ವ್ಯಾಪಾರ ನಡೆಸಲು ಹಿಂದುಗಳಿಗೆ ಮಾತ್ರ ಅವಕಾಶ ನೀಡಲು ನಿರ್ಧಾರ ಕೈಗೊಳ್ಳಲಾಗಿದೆ. ಸಂತೆಯಲ್ಲಿ ಈ ಹಿಂದಿನಂತೆ ಮುಕ್ತ ಅವಕಾಶ ನೀಡಲು ಈ ಹಿಂದಿನ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿ ಸಂತೆ ವ್ಯಾಪಾರಕ್ಕೆ ಎಲ್ಲರಿಗೂ ಮುಕ್ತ ಅವಕಾಶ ನೀಡಬಾರದು ಎಂದು ಒತ್ತಾಯಿಸಿ ಹಿಂದುತ್ವ ಸಂಘಟನೆಗಳು ಸುಳ್ಯ ತಾಲೂಕು ಹಿಂದೂ ಹಿತ ರಕ್ಷಣಾ ವೇದಿಕೆಯನ್ನು ರಚಿಸಿ ದೇವಸ್ಥಾನಕ್ಕೆ, ಜೀರ್ಣೋದ್ಘಾರ ಸಮಿತಿ ಅಧ್ಯಕ್ಷರಿಗೆ, ತಾಲೂಕು ಆಡಳಿತ, ಪೊಲೀಸ್ ಇಲಾಖೆಗೆ ಹಾಗು ಧಾರ್ಮಿಕ ದತ್ತಿ ಇಲಾಖೆಗೆ ಮನವಿ ನೀಡಿದರು.
ಈ ಹಿನ್ನಲೆಯಲ್ಲಿ ಚೆನ್ನಕೇಶವ ದೇವಸ್ಥಾನದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಡಾ.ಕ.ವಿ.ಚಿದಾನಂದ ಅವರ ಅಧ್ಯಕ್ಷತೆಯಲ್ಲಿ ತುರ್ತು ಸಭೆ ನಡೆಸಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಡಾ.ಹರಪುಸಾದ್ ತುದಿಯಡ್ಕ, ಜೀರ್ಣೋದ್ಧಾರ ಸಮಿತಿ ಸದಸ್ಯರಾದ ಎಂ.ಮೀನಾಕ್ಷಿ ಗೌಡ, ಲಿಂಗಪ್ಪ ಗೌಡ ಕೇರ್ವಳ, ಕೃಪಾಶಂಕರ ತುದಿಯಡ್ಕ, ನ.ಪಂ.ಅಧ್ಯಕ್ಷ ವಿನಯಕುಮಾರ್ ಕಂದಡ್ಕ, ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಹಿಂದೂ ಹಿತ ರಕ್ಷಣಾ ವೇದಿಕೆಯ ಸಂಚಾಲಕ ಚಿದಾನಂದ ವಿದ್ಯಾನಗರ, ಕೇಶವ ನಾಯಕ್ ಸುಳ್ಯ, ಸುನಿಲ್ ಕೇರ್ಪಳ,ನಿಕೇಶ್ ಉಬರಡ್ಕ, ಜಿ.ಜಿ.ನಾಯಕ್, ಗೋಪಾಲಕೃಷ್ಣ, ಲತೀಶ್ ಗುಂಡ, ಗಿರೀಶ್ ಕಲ್ಲುಗದ್ದ, ರಜತ್ ಅಡ್ಯಾರ್ ಮತ್ತಿತರರು ಇದ್ದರು.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್ನಲ್ಲಿ ಅಗ್ನಿ ಅವಘಡ : ಶಾಕ್ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…