Featured

ಸುಳ್ಯ : ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಕ್ಕೆ ಉರುಳಿ ಬಿದ್ದ ಬೈಕ್ – ಮಗ ಸಾವು ; ತಂದೆಗೆ ಗಂಭೀರ ಗಾಯ – vishwanews24

ಸುಳ್ಯ : ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಕ್ಕೆ ಉರುಳಿ ಬಿದ್ದ ಬೈಕ್ – ಮಗ ಸಾವು ; ತಂದೆಗೆ ಗಂಭೀರ ಗಾಯ

ಸುಳ್ಯ : ಶಬರಿಮಲೆಯ ಪ್ರಸಾದವನ್ನು ಸಂಬಂಧಿಕರಿಗೆ ನೀಡಲು ತೆರಳುತ್ತಿರುವ ವೇಳೆ ಅಪಾಯಕಾರಿ ತಿರುವಿನಲ್ಲಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮೋರಿಯಿಂದ ಕೆಳಕ್ಕೆ ಉರುಳಿ ಬಿದ್ದ ಪರಿಣಾಮ ಬೈಕ್ ಸವಾರ ಮಗ ಮೃತಟ್ಟು ಸಹಸವಾರ ತಂದೆ ತಂದೆ ಗಂಭೀರ ಗಾಯಗೊಂಡ ಘಟನೆ ಬೆಳ್ಳಾರೆ – ಸುಳ್ಯ ಮುಖ್ಯ ರಸ್ತೆಯ ಕಲ್ಲೋಣಿ ಎಂಬಲ್ಲಿ ಇಂದು ಮಂಗಳವಾರ ಬೆಳಗ್ಗೆ ಸಂಭವಿಸಿದೆ.

ಮೃತನನ್ನು ಕಡಬ ತಾಲೂಕಿನ ಮರ್ಧಾಳ ಸಮೀಪದ ಕೊಲ್ಯ ಮೋನಪ್ಪ ಅವರ ಪುತ್ರ ನಿಶಾಂತ್ (24) ಎಂದು ಗುರುತಿಸಲಾಗಿದೆ. ನಿಶಾಂತ್ ತಂದೆ ಮೋನಪ್ಪ ಅವರು ಗಂಭೀರ ಗಾಯಗೊಂಡಿದ್ದಾರೆ. ಶಬರಿಮಲೆ ಪ್ರಸಾದವನ್ನು ಸುಳ್ಯದ ಸಂಬಂಧಿಕರಿಗೆ ನೀಡಲು ತಂದೆ, ಮಗ ಬೈಕಿನಲ್ಲಿ ಸುಳ್ಯ ಕಡೆಗೆ ಬರುತ್ತಿದ್ದಾಗ ಈ ಘಟನೆ ನಡೆದಿದೆ. ತಿರುವಿನಲ್ಲಿ ನಿಯಂತ್ರಣ ತಪ್ಪಿ ಅಥವಾ ಇನ್ನೊಂದು ವಾಹನಕ್ಕೆ ಅಪಘಾತ ಆಗುವುದನ್ನು ತಪ್ಪಿಸುವ ಭರದಲ್ಲಿ ಘಟನೆ ಸಂಭವಿಸಿರುವ ಬಗ್ಗೆ ಶಂಕಿಸಲಾಗಿದೆ.

ನಿಶಾಂತ್ ಸ್ಥಳದಲ್ಲೇ ಮೃತಪಟ್ಟಿದ್ದು, ಗಂಭೀರ ಗಾಯಗೊಂಡ ಸಹಸವಾರ ಮೋನಪ್ಪ ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಬೆಳ್ಳಾರೆ ಪೊಲೀಸರು ಸ್ಳಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

9 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

10 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

10 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

10 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

11 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

11 hours ago