ಸುಳ್ಯ: ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು – Vishwanews24

Featured, ದಕ್ಷಿಣ ಕನ್ನಡ

ಸುಳ್ಯ: ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಿಸಿಎಂ ಹಾಸ್ಟೆಲ್‌ ವಿದ್ಯಾರ್ಥಿನಿ 

ಸುಳ್ಯ: ಬೆಂಗಳೂರು ಮೂಲದ ವಿದ್ಯಾರ್ಥಿನಿಯೊಬ್ಬಳು ಸುಳ್ಯದ ಬಿಸಿಎಂ ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಇಂದು ನಡೆದಿದೆ.

ರಾಮನಾಥಪುರದ ಕಾರಮಂಗಲ ತಾಲೂಕಿನ ಮಾರ್ಲಮಂಗಲ ಪುರುಷೋತ್ತಮ ಎಂಬವರ ಪುತ್ರಿ ಸೋನಿಯಾ (18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಸುಳ್ಯದ ಕುರುಂಜಿಭಾಗ್ ಸಮೀಪದ ಬಿಸಿಎಂ ಹಾಸ್ಟೆಲ್‌ನಲ್ಲಿ ಘಟನೆ ನಡೆದಿದೆ. ಈಕೆ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯಾಗಿದ್ದಳು.

ಕಾರ್ಕಳ: ಸೈಕಲ್‌ನಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಕೂಲಿ ಕಾರ್ಮಿಕ ಚಿಕಿತ್ಸೆ ಫಲಕಾರಿಯಾಗದೆ ಸಾವು – Vishwanews24

ಸೋನಿಯಾ ಇಂದು ಕಾಲೇಜಿಗೆ ಹೋಗದೆ ರೂಂನಲ್ಲಿಯೇ ಉಳಿದುಕೊಂಡಿದ್ದಳು. ಮಧ್ಯಾಹ್ನ ಊಟಕ್ಕೆ ತಟ್ಟೆ ತರಲೆಂದು ರೂಂ ಬಳಿ ಬಂದಿದ್ದ ಆಕೆಯ ಗೆಳತಿ ಎಷ್ಟೇ ಬಾಗಿಲು ಬಡಿದರೂ ಸೋನಿಯಾ ಬಾಗಿಲು ತೆರೆದಿರಲಿಲ್ಲ. ಮಲಗಿರಬಹುದೆಂದು ಸ್ವಲ್ಪ ಹೊತ್ತು ಅಲ್ಲೇ ಇದ್ದು, ಮತ್ತೆ ಬಾಗಿಲು ಬಡಿದಾಗಲೂ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆಯಲ್ಲಿ ಗೆಳತಿ ವಾರ್ಡನ್‌ಗೆ ಮಾಹಿತಿ ನೀಡಿದ್ದಾಳೆ. ಕೂಡಲೇ ಹಾಸ್ಟೆಲ್ ಸಿಬಂದಿ ಬಾಗಿಲು ಒಡೆದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಸುಳ್ಯ ಪೊಲೀಸರು ಆಗಮಿಸಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಮಾತಿನ ಮೇಲೆ ನಿಯಂತ್ರಣವಿರಲಿ : ನೋಡಿ ಇಂದಿನ ದಿನ ಭವಿಷ್ಯ -Vishwanews24

Leave a Reply