ಸುಳ್ಯ :ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರುಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದಾರೆ. ರಿಯಾಜ್ ಯೂಸಫ್ ಹಾರಳ್ಳಿ ಬಂಧಿತ ಆರೋಪಿ. ಇತ ವಿದೇಶಕ್ಕೆ ಪರಾರಿಯಾಗುಲು ಯತ್ನಿಸುತ್ತಿದ್ದಾಗ ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸೆರೆ ಹಿಡಿಯಲಾಗಿದೆ.
ಈ ಮೂಲಕ ಬಂಧಿತ ಆರೋಪಿಗಳು ಸಂಖ್ಯೆ 19 ಕ್ಕೆ ಏರಿಕೆಯಾಗಿದೆ. ಒಂದು ತಿಂಗಳ ಹಿಂದೆಯಷ್ಟೇ ಸಕಲೇಶಪುರದಲ್ಲಿ ಮುಸ್ತಾಫಾ ಪೈಚಾರ್ನನ್ನು ಬಂಧಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ನ ನಾಲ್ಕನೇ ಆರೋಪಿಯನ್ನು ಕಳೆದ ಮೇ.10 ರಂದು ಹಾಸನ ಜಿಲ್ಲೆಯ ಸಕಲೇಶಪುರದ ಆನೆಮಹಲ್ ಬಳಿ ರಾಷ್ಟ್ರೀಯ ತನಿಖಾ ಸಂಸ್ಥೆ ಅಧಿಕಾರಿಗಳು ಬಂಧಿಸಿದ್ದರು. ಹೌದು, ಸುಳ್ಯದ ಶಾಂತಿನಗರ ನಿವಾಸಿ ಮುಸ್ತಾಫ ಪೈಚಾರ್ (43) ನನ್ನು ಅರೆಸ್ಟ್ ಮಾಡಿ ಅಧಿಕಾರಿಗಳು ಬೆಂಗಳೂರು ಎನ್ಐಎ ಕಚೇರಿಗೆ ಕರೆದೊಯ್ದಿದ್ದರು. ಇದರ ಬೆನ್ನಲ್ಲೇ ಇದೀಗ ಮತ್ತೋರ್ವನನ್ನು ಬಂಧಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ 2022ರ ಜುಲೈ 26 ರಂದು ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು, ಆತನ ಕೋಳಿ ಅಂಗಡಿ ಬಳಿಯೇ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದರು. ನಂತರ ಗಾಯಗೊಂಡಿದ್ದ ಪ್ರವೀಣ್ನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…
ಕೊಟ್ಟಿಗೆಹಾರ: ಭೀಕರ ರಸ್ತೆ ಅಪಘಾತ ; ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು ಕೊಟ್ಟಿಗೆಹಾರ: ವಿಲ್ಪುರಂ - ಮಂಗಳೂರು…
ಹೆಬ್ರಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು ಉಡುಪಿ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು…
ಉಡುಪಿ: ಡೇವಿಡ್ ಡಿಸೋಜ ಕೊಲೆ ಪ್ರಕರಣ : ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ; ಶೂಟರ್ ಕಾಲಿಗೆ ಗುಂಡೇಟು…