ಸುಳ್ಯ: ಮಂಗಳೂರು ಮೂಲದ ವಿವಾಹಿತ ಯುವಕನೋರ್ವ ಪ್ರೇಯಸಿಯೊಂದಿಗೆ ಸುಳ್ಯದ ಗಾಂಧಿನಗರದ ಲಾಡ್ಜ್ ಒಂದರಲ್ಲಿ ಬಂದು ತಂಗಿದ್ದಾರೆಂದು ತಿಳಿದ ಯುವಕನ ಪತ್ನಿ ಡಿ.೧೧ರಂದು ಸಂಜೆ ಸುಳ್ಯಕ್ಕೆ ಬಂದು ಅವರು ತಂಗಿದ್ದ ಲಾಡ್ಜ್ ಬಳಿ ಬಂದು ಬೀದಿರಂಪ ಮಾಡಿದ ಘಟನೆ ವರದಿಯಾಗಿದೆ.
ಲಾಡ್ಜ್ ನಲ್ಲಿದ್ದ ಯುವತಿಯ ಜತೆಗಿದ್ದ ವಿವಾಹಿತ ಯುವಕ ತನ್ನ ಪತ್ನಿ ಲಾಡ್ಜ್ನ ರಿಸೆಪ್ಶನ್ ಬಳಿಗೆ ಬಂದು ನಿಂತಿರುವ ವಿಷಯ ತಿಳಿದು ಪ್ರೇಯಸಿಯೊಂದಿಗೆ ಲಾಡ್ಜ್ ನಿಂದ ಹೊರಗೆ ಬಂದಿದ್ದಾರೆ.
ಈ ಜೋಡಿಯನ್ನು ನೋಡಿದ ಆತನ ಹೆಂಡತಿ ರಸ್ತೆಯಲ್ಲಿ ಗಂಡನನ್ನು ಮತ್ತು ಆ ಯುವತಿಯನ್ನು ತೀವ್ರವಾಗಿ ತರಾಟೆಗೆತ್ತಿಕೊಂಡಿದ್ದು, ಗಲಾಟೆ ಉಂಟಾಗಿದೆ. ಈ ವೇಳೆ ನೂರಾರು ಜನ ಜಮಾಯಿಸಿದ್ದು, ಕೋಪಗೊಂಡಿದ್ದ ಪತ್ನಿಯನ್ನು ಸಮಾಧಾನಪಡಿಸಲು ಯುವಕ ಎಷ್ಟೇ ಪ್ರಯತ್ನ ಪಟ್ಟರೂ ಆತನಿಗೆ ಸಾಧ್ಯವಾಗಲಿಲ್ಲ.
ಕೊನೆಗೆ ಪತಿ ಹಾಗೂ ಮತ್ತವನ ಪ್ರೇಯಸಿಯನ್ನು ರಸ್ತೆಯಲ್ಲಿ ಎಳೆದಾಡಿ, ತನ್ನ ಆಕ್ರೋಶವನ್ನು ವ್ಯಕ್ತಪಡಿಸಿದ್ದಾಳೆ. ಪೊಲೀಸರಿಗೆ ವಿಷಯ ತಿಳಿದು ಅವರು ಬಂದು ಮೂವರನ್ನೂ ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಿ ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…