ಸುಳ್ಯ: ಬಾಲ್ಯ ವಿವಾಹ ನಡೆಯುತ್ತಿದೆ ಎಂಬ ಮಾಹಿತಿ ದೊರೆತ ಹಿನ್ನಲೆಯಲ್ಲಿ ಸಿ.ಡಿ.ಪಿ.ಒ. ರಶ್ಮಿ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ತಂಡ ಮದುವೆಯನ್ನು ತಡೆದ ಘಟನೆ ಕಂದಡ್ಕ ಎಂಬಲ್ಲಿ ನಡೆದಿದೆ.
ತಮಿಳು ಕಾಲನಿಯಲ್ಲಿನ ಪ್ರತಾಪ ಎಂಬವನಿಗೆ (26) ಜು.15 ರಂದು ಮೈಸೂರಿನ ಹುಡುಗಿಯೊಂದಿಗೆ ಮದುವೆ ನಡೆಯುವುದು ಎಂದು ನಿಶ್ಚಯಿಸಲಾಗಿತ್ತು. ಹುಡುಗಿಗೆ 18 ವರ್ಷ ಆಗಿಲ್ಲ ಎಂಬ ಮಾಹಿತಿ ಬಂದ ಹಿನ್ನೆಲೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪೂರಕ ಮಾಹಿತಿ ಕೇಳಿದೆ. ಈ ಸಂದರ್ಭ ಹುಡುಗಿಯ ಕುಟುಂಬ ದಾಖಲೆ ನೀಡಲು ತಡವರಿಸಿ 18 ವರ್ಷವಾಗಿಲ್ಲ ಎಂದು ತಪ್ಪೊಪ್ಪಿಕೊಂಡಿದ್ದಾರೆ.
ಹುಡುಗಿಗೆ 18 ವರ್ಷ ತುಂಬಿದ ಬಳಿಕ ಇದೇ ಹುಡುಗನಿಗೆ ಮದುವೆ ಮಾಡಿಕೊಡಬಹುದು ಎಂದು ಮುಚ್ಚಳಿಕೆ ಬರೆದು ಅಪ್ರಾಪ್ತೆಯನ್ನು ಕುಟುಂಬ ಸಮೇತ ಮೈಸೂರಿಗೆ ಕಳುಹಿಸಲಾಗಿದೆ ಎಂದು ಸಿ.ಡಿ.ಪಿ.ಒ ರಶ್ಮಿ ನೆಕ್ರಾಜೆ ತಿಳಿಸಿದ್ದಾರೆ.
ಸಹಾಯಕ ಮಕ್ಕಳ ಸಂರಕ್ಷಣಾಧಿಕಾರಿ ದೀಪಿಕಾ, ಗ್ರಾಮಕರಣಿಕ ತಿಪ್ಪೇಶ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…