ಸುಳ್ಯ: ಬಾಲ್ಯ ವಿವಾಹ ನಡೆಯುತ್ತಿದೆ ಎಂಬ ಮಾಹಿತಿ ದೊರೆತ ಹಿನ್ನಲೆಯಲ್ಲಿ ಸಿ.ಡಿ.ಪಿ.ಒ. ರಶ್ಮಿ ನೇತೃತ್ವದಲ್ಲಿ ದಾಳಿ ನಡೆಸಿದ ಅಧಿಕಾರಿಗಳು ತಂಡ ಮದುವೆಯನ್ನು ತಡೆದ ಘಟನೆ ಕಂದಡ್ಕ ಎಂಬಲ್ಲಿ ನಡೆದಿದೆ.
ತಮಿಳು ಕಾಲನಿಯಲ್ಲಿನ ಪ್ರತಾಪ ಎಂಬವನಿಗೆ (26) ಜು.15 ರಂದು ಮೈಸೂರಿನ ಹುಡುಗಿಯೊಂದಿಗೆ ಮದುವೆ ನಡೆಯುವುದು ಎಂದು ನಿಶ್ಚಯಿಸಲಾಗಿತ್ತು. ಹುಡುಗಿಗೆ 18 ವರ್ಷ ಆಗಿಲ್ಲ ಎಂಬ ಮಾಹಿತಿ ಬಂದ ಹಿನ್ನೆಲೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪೂರಕ ಮಾಹಿತಿ ಕೇಳಿದೆ. ಈ ಸಂದರ್ಭ ಹುಡುಗಿಯ ಕುಟುಂಬ ದಾಖಲೆ ನೀಡಲು ತಡವರಿಸಿ 18 ವರ್ಷವಾಗಿಲ್ಲ ಎಂದು ತಪ್ಪೊಪ್ಪಿಕೊಂಡಿದ್ದಾರೆ.
ಹುಡುಗಿಗೆ 18 ವರ್ಷ ತುಂಬಿದ ಬಳಿಕ ಇದೇ ಹುಡುಗನಿಗೆ ಮದುವೆ ಮಾಡಿಕೊಡಬಹುದು ಎಂದು ಮುಚ್ಚಳಿಕೆ ಬರೆದು ಅಪ್ರಾಪ್ತೆಯನ್ನು ಕುಟುಂಬ ಸಮೇತ ಮೈಸೂರಿಗೆ ಕಳುಹಿಸಲಾಗಿದೆ ಎಂದು ಸಿ.ಡಿ.ಪಿ.ಒ ರಶ್ಮಿ ನೆಕ್ರಾಜೆ ತಿಳಿಸಿದ್ದಾರೆ.
ಸಹಾಯಕ ಮಕ್ಕಳ ಸಂರಕ್ಷಣಾಧಿಕಾರಿ ದೀಪಿಕಾ, ಗ್ರಾಮಕರಣಿಕ ತಿಪ್ಪೇಶ್ ಅವರು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…