Judge and gavel in courtroom
ಸುಳ್ಯ: ತಾಯಿಯೊಬ್ಬಳು ತನ್ನ 5 ವರ್ಷ ಪ್ರಾಯದ ಮಗುವಿಗೆ ಬಿಸಿ ಪಾತ್ರೆಯಿಂದ ಸುಟ್ಟು ಗಾಯಗೊಳಿಸಿದ ಪ್ರಕರಣದ ವಿಚಾರಣೆ ನ್ಯಾಯಾಲಯದಲ್ಲಿ ನಡೆದು ಆರೋಪ ಸಾಬೀತಾಗಿದ್ದು ನ್ಯಾಯಾಲಯ ಆರೋಪಿಗೆ ಶಿಕ್ಷೆ ಘೋಷಿಸಿದೆ.
ಕಾವ್ಯಶ್ರೀ ಎಂಬವರು 2022ರ ಆ.16ರಂದು ಸುಳ್ಯ ಗಾಂಧಿನಗರ ನಾವೂರು ಎಂಬಲ್ಲಿರುವ ತನ್ನ ತಾಯಿಯ ಮನೆಯಲ್ಲಿ ಬಿಸಿ ಹಾಲಿನ ಪಾತ್ರೆಯಿಂದ ತನ್ನ 5 ವರ್ಷ ಪ್ರಾಯದ ಪುತ್ರಿಯ ದೇಹದ ವಿವಿಧ ಕಡೆ ಸುಟ್ಟು ನೋವುಂಟು ಮಾಡಿದ್ದರು. ಈ ಬಗ್ಗೆ ಮಹಿಳಾ ಮತ್ತು ಮಕ್ಕಳ ಸಂರಕ್ಷಣಾಧಿಕಾರಿ ರಶ್ಮಿ ಅವರಿಗೆ ವಿಷಯ ಗೊತ್ತಾಗಿ ಸುಳ್ಯ ಠಾಣೆಯಲ್ಲಿ ತಾಯಿ ವಿರುದ್ಧ ದೂರು ದಾಖಲಿಸಿದ್ದರು.
ಸುಳ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು ಹಿರಿಯ ಸಿವಿಲ್ ಜಡ್ಜ್ ಮತ್ತು ಜೆಎಂಎಫ್ಸಿ ನ್ಯಾಯಾಧೀಶ ಬಿ.ಮೋಹನ್ ಬಾಬು ಅವರು ಆಪಾದಿತೆಯನ್ನು ದೋಷಿಯೆಂದು ಘೋಷಿಸಿದ್ದಾರೆ. ಅಪಾದಿತೆಗೆ ಒಟ್ಟು 10 ಸಾವಿರ ರೂ. ದಂಡ, ದಂಡ ತೆರಲು ತಪ್ಪಿದ್ದಲ್ಲಿ 2 ತಿಂಗಳ ಸಾದಾ ಕಾರಗೃಹ ವಾಸದ ತೀರ್ಪು ನೀಡಿದೆ. ಸರಕಾರದ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕರು ವಾದಿಸಿದ್ದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…