ಸುಳ್ಯ,: ದಕ್ಷಿಣ ಕನ್ನಡ ಗಡಿಭಾಗವಾದ ಸುಳ್ಯ ತಾಲೂಕಿನಲ್ಲಿ ಮತ್ತೊಮ್ಮೆ ಭೂಮಿ ಕಂಪಿಸಿದ ಅನುಭವವಾಗಿ ಮನೆಮಂದಿ ಜೀವಭಯದಿಂದ ಹೊರಗೋಡಿ ಬಂದ ಘಟನೆ ಇಂದು ಮುಂಜಾನೆ 7ರ ಸುಮಾರಿಗೆ ನಡೆದಿದೆ.
ಸಂಪಾಜೆ, ಅರಂತೋಡು,ಪೆರಾಜೆ, ಜಾಲ್ಸೂರು, ಉಬರಡ್ಕ, ತೊಡಿಕಾನ, ಮಿತ್ತೂರು ಸೇರಿದಂತೆ ತಾಲೂಕಿನ ವಿವಿಧ ಭಾಗಗಳಲ್ಲಿ ಭೂಮಿ ಕಂಪಿಸಿದ್ದು, ಜನರು ಭಯಭೀತಗೊಂಡು ಮನೆಯಿಂದ ಹೊರಗೆ ಬಂದಿದ್ದಾರೆ.
ಬೆಳಿಗ್ಗೆ 7.45ರ ಸಮಯದಲ್ಲಿ ಕಂಪನದ ಅನುಭವ ಆಗಿದ್ದು, ಭಾರೀ ಶಬ್ದದೊಂದಿಗೆ ಭೂಮಿ ಕಂಪಿಸಿರುವ ಬಗ್ಗೆ ಸಾರ್ವಜನಿಕರು ತಮ್ಮ ಅನುಭವಗಳನ್ನು ಹಂಚಿಕೊಂಡಿದ್ದಾರೆ.
ಕಿಟಕಿ, ಪಾತ್ರೆ , ಮನೆಯೊಳಗಿದ್ದ ವಸ್ತುಗಳು ಕಂಪನದಿಂದ ಅಲುಗಾಡಿದ್ದು ,ಪಾತ್ರೆಗಳೆಲ್ಲವೂ ಕೆಳಗೆ ಬಿದ್ದಿದ್ದು , ಸುಮಾರು 3 – 4 ಸೆಕೆಂಡುಗಳ ಕಾಲ ಭೂಮಿ ಕಂಪಿಸಿದ ಅನುಭವ ಆಗಿದೆ.
ಜೂ . 25 ರಂದು ಕೂಡಾ ಭೂಕಂಪನದ ಅನುಭವವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆಯ ಭೂಕಂಪ ದಾಖಲಾಗಿತ್ತು ಎಂದು ರಾಜ್ಯ ನ್ಯಾಚುರಲ್ ಡಿಸಾಸ್ಟರ್ ಮಾನಿಟರಿಂಗ್ ಸೆಂಟರ್ ತಿಳಿಸಿತ್ತು. ಬೆಳಗ್ಗೆ ಸುಮಾರು 9 ಗಂಟೆ 9 ಸೆಕೆಂಡಿಗೆ ಈ ಭೂಕಂಪನ ದಾಖಲಾಗಿದ್ದು, 4.7 ಕಿಲೋಮೀಟರ್ ಮುಖ್ಯ ಸ್ಥಾನದಿಂದ ಸುತ್ತಳತೆ ವ್ಯಾಪ್ತಿಯಲ್ಲಿ ಭೂಕಂಪನ ಸಂಭವಿಸಿತ್ತು.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…