Featured

ಸುಳ್ಯ: ಮರದ ಬಡಿಗೆಗೆ ಸೀರೆ ಕಟ್ಟಿ ವೃದ್ದೆಯನ್ನು ಹೊತ್ತು ಸಾಗಿದ ಪ್ರಕರಣಕ್ಕೆ ಟ್ವಿಸ್ಟ್ – ಮನೆಯಿಂದ ತೆಂಗಿನಕಾಯಿ ಸಾಗಿಸಿದ ಜೀಪು – Vishwanews24

ಸುಳ್ಯ: ಮರದ ಬಡಿಗೆಗೆ ಸೀರೆ ಕಟ್ಟಿ ವೃದ್ದೆಯನ್ನು ಹೊತ್ತು ಸಾಗಿದ ಪ್ರಕರಣಕ್ಕೆ ಟ್ವಿಸ್ಟ್ ಮನೆಯಿಂದ ತೆಂಗಿನಕಾಯಿ ಸಾಗಿಸಿದ ಜೀಪು

ಸುಳ್ಯ,: ರಸ್ತೆ ಸಂಪರ್ಕವಿಲ್ಲದ ಕಾರಣ ಮರದ ಬಡಿಗೆಗೆ ಸೀರೆ ಕಟ್ಟಿ ಅದರಲ್ಲಿ ಅನಾರೋಗ್ಯಪೀಡಿತ ವೃದ್ದೆಯನ್ನು ಹೊತ್ತೊಯ್ದ ಘಟನೆಗೆ ಇದೀಗ ಟ್ವಿಸ್ಟ್‌ ಸಿಕ್ಕಿದೆ. ಅದೇ ವೃದ್ದೆಯ ಮನೆಯಿಂದ ಜೀಪು ಮೂಲಕ ತೆಂಗಿನಕಾಯಿ ಕೊಂಡೊಯ್ಯುವ ವೀಡಿಯೋ ವೈರಲ್ ಆಗಿದೆ.

ಕಡಬ ತಾಲೂಕಿನ ನೂಜಿಬಾಳ್ತಿಲದ ಕಮಲಾ (70) ಎಂಬ ವೃದ್ದೆಯನ್ನು ಮರದ ಕಂಬಗಳಿಗೆ ಸೀರೆ ಕಟ್ಟಿ ಅದರಲ್ಲಿ ಮಲಗಿಸಿ ಚಿಕಿತ್ಸೆಗಾಗಿ ಕರೆದೊಯ್ಯುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ದಿನಗಳ ಹಿಂದೆ ವೈರಲ್ ಆಗಿತ್ತು. ರಸ್ತೆ ವ್ಯವಸ್ಥೆ ಇಲ್ಲದ ಕಾರಣ ಆಂಬುಲೆನ್ಸ್‌ ಬರಲು ಸಾಧ್ಯವಾಗುತ್ತಿಲ್ಲ ಎಂಬುದನ್ನು ಆಡಳಿತ ವರ್ಗಕ್ಕೆ ತಲುಪಿಸುವ ಉದ್ದೇಶದಿಂದ ಈ ವೀಡಿಯೋ ಮಾಡಲಾಗಿತ್ತು. ಆದರೆ ಗುರುವಾರ ಅದೇ ಮನೆಗೆ ರಸ್ತೆಯಲ್ಲಿ ಜೀಪು ಹೋಗಿದ್ದು, ತೆಂಗಿನಕಾಯಿ ತುಂಬಿಸಿಕೊಂಡು ಹಿಂತಿರುಗಿದೆ. ಇದನ್ನು ಗಮನಿಸಿದ ಸ್ಥಳೀಯರು ಜೀಪು ಮನೆಗೆ ತೆರಳಿದ ಮತ್ತು ಹಿಂತಿರುಗಿದ ವೀಡಿಯೋವನ್ನು ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ವಿಪರೀತ ಮಳೆ ಬಿದ್ದರೂ ಜೀಪು ಮನೆಯವರೆಗೆ ಬಂದು ತೆಂಗಿನಕಾಯಿ ಕೊಂಡೊಯ್ದಿದೆ. ಆದರೆ ವೃದ್ದೆಯನ್ನು ಮರದ ಕೊಂಬೆಯಲ್ಲಿ ಸಾಗಿಸಲಾಗಿದೆ. ಇದು ಸರಿಯಲ್ಲ ಎಂದು ಸ್ಥಳೀಯರು ಮನೆಯವರನ್ನು ಪ್ರಶ್ನಿಸುತ್ತಿರುವುದು ಕೂಡಾ ವೀಡಿಯೋದಲ್ಲಿ ದಾಖಲಾಗಿದೆ. ಇದೇ ವೇಳೆ ನೂಜಿಬಾಳ್ತಿಲ ಗ್ರಾಮ ಪಂಚಾಯತ್‌ ಸದಸ್ಯರು ಕೂಡಾ ಕುಟುಂಬದ ಈ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉಡುಪಿ: ಹೃದಯಾಘಾತದಿಂದ ಪತಿ ಸಾವು ..ಪತ್ನಿ, ಮಗುವನ್ನು ಸ್ವೀಕರಿಸಲು ನಿರಾಕರಿಸಿದ ಕುಟುಂಬ ..

Vishwa News 24

Recent Posts

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ 4 ತಿಂಗಳ ಕಾಲ ನಿಷೇಧ – vishwanews24

ಮಲ್ಪೆ : ಸೈಂಟ್‌ಮೇರೀಸ್‌ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…

8 hours ago

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ – vishwanews24

ಜೂನ್‌ 21ರಂದು ನೀಟ್‌ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್‌ 21 ರಂದು ನೀಟ್‌–ಯುಜಿ  ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…

9 hours ago

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ – vishwanews24

ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ :  ಪೃಥ್ವಿರಾಜ್…

1 day ago

ಜನಿವಾರ, ಹಿಜಾಬ್, ಉಡುದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು ಹೊರತು ಕೇಸರಿ ಶಾಲಿಗೆ ಅವಕಾಶ ಇಲ್ಲ : ಸಿಎಂ ಸ್ಪಷ್ಟನೆ – vishwanews24

ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…

1 day ago

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ತಮಿಳುನಾಡು ಸರ್ಕಾರ ಆದೇಶ – vishwanews24

ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ :  ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…

1 day ago

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ – vishwanews24

ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್‌ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…

1 day ago