Featured

ಸುಳ್ಯ: ಮಹಿಳೆ ಹತ್ಯೆ ಪ್ರಕರಣ ; ಆರೋಪಿ ಅರೆಸ್ಟ್ – vishwanews24

ಸುಳ್ಯ: ಮಹಿಳೆ ಹತ್ಯೆ ಪ್ರಕರಣ ; ಆರೋಪಿ ಅರೆಸ್ಟ್

ಸುಳ್ಯ: ಮಹಿಳೆಯೋರ್ವರ ಹತ್ಯೆ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಆರೋಪಿಯನ್ನು ಬೆಳ್ಳಾರೆ ಪೊಲೀಸರು ಜೂನ್ 11ರಂದು ಬಂಧಿಸಿದ್ದಾರೆ.

ಜೋಗಿಯಡ್ಕದ ಜಯರಾಮ ನಾಯ್ಕ ಬಂಧಿತ ಆರೋಪಿ.

ಬೆಳ್ಳಾರೆಯ ಪಾಟಾಜೆ ನಿವಾಸಿ ನಳಿನಿ(55) ಮೃತ ಮಹಿಳೆಯಾಗಿದ್ದು, ನಳಿನಿ ಅವರ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ ಘಟನೆ ರವಿವಾರ ರಾತ್ರಿ ನಡೆದಿತ್ತು. ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಘಟನೆ ಹಿನ್ನೆಲೆ

ನಳಿನಿ ಅವರು 2 ವರ್ಷಗಳ ಹಿಂದೆ ಮನೆ ಬಿಟ್ಟಿದ್ದು, ವಾರಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದರು. ಬಸ್ ನಿಲ್ದಾಣ, ಮತ್ತಿತರ ಕಡೆಗಳಲ್ಲಿ ನಳಿನಿ ಮಲಗುತ್ತಿದ್ದರು. ಇನ್ನು ಆರೋಪಿ ಜಯರಾಮ ನಾಯ್ಕ ಕೂಡ ಮನೆ ಬಿಟ್ಟಿದ್ದು, ಆತನೂ ಕೂಡ ಬಸ್ ನಿಲ್ದಾಣ, ಮಾರುಕಟ್ಟೆಯಲ್ಲಿ ರಾತ್ರಿ ಉಳಿಯುತ್ತಿದ್ದ. ಆರೋಪಿ ಜಯರಾಮ ಮದ್ಯವ್ಯಸನಿಯಾಗಿದ್ದನು. ನಳಿನಿ ಹಾಗೂ ಜಯರಾಮ ಕೊಲೆ ನಡೆದ ರಾತ್ರಿ ಬೆಳ್ಳಾರೆಯ ಎಪಿಎಂಸಿ ಮಾರುಕಟ್ಟೆ ಬಳಿ ತಂಗಿದ್ದರು. ಮಧ್ಯರಾತ್ರಿ ಎದ್ದು ಹೊರಗಡೆ ಹೋಗುವಾಗ ನಳಿನಿ ಅವರ ಕಾಲಿಗೆ ಜಯರಾಮ ತುಳಿದು ಹೋಗಿದ್ದ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಕುಡಿತದ ಅಮಲಿನಲ್ಲಿದ್ದ ಜಯರಾಮ ಕಲ್ಲನ್ನು ತಂದು ನಳಿನಿ ಅವರ ತಲೆಗೆ ಎತ್ತಿ ಹಾಕಿದ್ದಾನೆ. ಪರಿಣಾಮ ಗಂಭೀರವಾಗಿ ಗಾಯಗೊಂಡ ನಳಿನಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Vishwa News 24

Recent Posts

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

10 minutes ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

1 hour ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

1 hour ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

2 hours ago

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ – vishwanews24

ಕಟಪಾಡಿ : ಶೀಘ್ರ ಒಂದು ಭಾಗದಲ್ಲಿ ವಾಹನ ಸಂಚಾರಕ್ಕೆ ಮುಕ್ತ ಕಟಪಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಅಂಡರ್‌ಪಾಸ್ ಕಾಮಗಾರಿ ವೇಗದಲ್ಲಿ ನಡೆಯುತಿದ್ದು,…

2 hours ago

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ – vishwanews24

ಉಡುಪಿ: ಸಂತೆಕಟ್ಟೆ ಅಂಡರ್‌ಪಾಸ್‌ನ ಮೇಲ್ಸೇತುವೆ ವಾಹನ ಸಂಚಾರಕ್ಕೆ ಮುಕ್ತ ; ಶೀಘ್ರವೇ ಅಧಿಕೃತ ಉದ್ಘಾಟನೆ: ಸಂಸದ ಕೋಟ ಶ್ರೀನಿವಾಸ ಪೂಜಾರಿ…

2 hours ago