ಸುಳ್ಯ : ಮೆದುಳಿನ ರಕ್ತಸ್ರಾವದಿಂದ ಮೃತಪಟ್ಟ ಯುವತಿಯ ಅಂಗಾಂಗವನ್ನು ದಾನ ಮಾಡುವ ಮೂಲಕ ಯುವತಿಯ ತಾಯಿ ಸಾರ್ಥಕತೆ ಮರೆದಿದ್ದಾರೆ.
ಮೃತ ಸಿಂಧು ಶೆಟ್ಟಿ ಸುಳ್ಯದ ರಥಬೀದಿ ನಿವಾಸಿ ಮಮತಾ ಶೆಟ್ಟಿ ಅವರ ಪುತ್ರಿಯಾಗಿದ್ದು, ಸುಳ್ಯ ಸರ್ಕಾರಿ ಕಾಲೇಜಿನಲ್ಲಿ ಪದವಿ ಪೂರ್ಣಗೊಳಿಸಿ, ಪುತ್ತೂರು ಆದರ್ಶ ವಿವಿದೋದ್ದೇಶ ಸಹಕಾರಿ ಬ್ಯಾಂಕಿನಲ್ಲಿ ಉದ್ಯೋಗದಲ್ಲಿದ್ದರು. ಡಿಸೆಂಬರ್ 16ರಂದು ಬ್ಯಾಂಕ್ ಕೆಲಸ ಮುಗಿಸಿ ಬಸ್ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಸಿಂಧು ಅವರಿಗೆ ತೀವ್ರ ತಲೆನೋವು ಕಾಣಿಸಿಕೊಂಡಿತು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾತ್ತು.
ಈ ವೇಳೆ ಅವರಿಗೆ ನರದ ಸಮಸ್ಯೆ ಉಂಟಾಗಿರುವುದು ಪತ್ತೆಯಾಯಿತು. ಮರುದಿನ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಮೆದುಳಿನ ರಕ್ತ ಸ್ರಾವ ಉಂಟಾದ ಹಿನ್ನೆಲೆಯಲ್ಲಿ ಶಸ್ತ್ರ ಚಿಕಿತ್ಸೆಯನ್ನೂ ನಡೆಸಲಾಯಿತು. ಒಮ್ಮೆ ಪ್ರಜ್ಞೆ ಬಂದಿತ್ತಾದರೂ ಬಳಿಕ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡು ಕೋಮಾಗೆ ಜಾರಿದ್ದರು.
ಯುವತಿಯ ಮೆದುಳು ಸಂಪೂರ್ಣವಾಗಿ ನಿಷ್ಕ್ರಿಯಗೊಂಡರೂ, ಯಂತ್ರಗಳ ಸಹಾಯದಿಂದ ಹೃದಯ, ಶ್ವಾಸಕೋಶ, ಕಿಡ್ನಿ, ಲಿವರ್, ಕಣ್ಣುಗಳು ಮುಂತಾದ ಪ್ರಮುಖ ಅಂಗಾಂಗಳನ್ನು ಉಳಿಸಲಾಗಿದೆ. ಈ ಅಂಗಗಳನ್ನು ದಾನ ಮಾಡುವುದರಿಂದ ಇತರರಿಗೆ ಜೀವದಾನ ಮಾಡಿದಂತಾಗುತ್ತದೆ ಎಂದು ಮೃತ ಯುವತಿಯ ತಾಯಿ ಮಮತಾ ಅವರು ಮನೆಯ ಉಳಿದವರೊಂದಿಗೆ ಚರ್ಚಿಸಿ ಅಂಗಾಂಗಗಳನ್ನು ದಾನಮಾಡುವ ನಿರ್ಧಾರ ಕೈಗೊಂಡರು. ಅದರಂತೆ ಮೈಸೂರಿನ ಅಪೋಲೋ ಆಸ್ಪತ್ರೆ, ನಿಟ್ಟೆ, ಎ.ಜೆ. ಮತ್ತು ಕೆ.ಎಂ.ಸಿ. ಆಸ್ಪತ್ರೆಗಳಿಗೆ ಅಂಗಾಂಗ ದಾನ ಮಾಡಲಾಯಿತು.
ಅಂಗಾಂಗ ದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಿಂಧು ಅವರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ಸಿದ್ದಕಟ್ಟೆಯಲ್ಲಿರುವ ಮಾವ ರಾಜೇಶ್ ಅವರ ಮನೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…