ಸುಳ್ಯ : ಮೆದುಳಿನ ರಕ್ತಸ್ರಾವದಿಂದ ಮೃತಪಟ್ಟ ಯುವತಿಯ ಅಂಗಾಂಗವನ್ನು ದಾನ ಮಾಡುವ ಮೂಲಕ ಯುವತಿಯ ತಾಯಿ ಸಾರ್ಥಕತೆ ಮರೆದಿದ್ದಾರೆ.
ಮೃತ ಸಿಂಧು ಶೆಟ್ಟಿ ಸುಳ್ಯದ ರಥಬೀದಿ ನಿವಾಸಿ ಮಮತಾ ಶೆಟ್ಟಿ ಅವರ ಪುತ್ರಿಯಾಗಿದ್ದು, ಸುಳ್ಯ ಸರ್ಕಾರಿ ಕಾಲೇಜಿನಲ್ಲಿ ಪದವಿ ಪೂರ್ಣಗೊಳಿಸಿ, ಪುತ್ತೂರು ಆದರ್ಶ ವಿವಿದೋದ್ದೇಶ ಸಹಕಾರಿ ಬ್ಯಾಂಕಿನಲ್ಲಿ ಉದ್ಯೋಗದಲ್ಲಿದ್ದರು. ಡಿಸೆಂಬರ್ 16ರಂದು ಬ್ಯಾಂಕ್ ಕೆಲಸ ಮುಗಿಸಿ ಬಸ್ನಲ್ಲಿ ಮನೆಗೆ ತೆರಳುತ್ತಿದ್ದ ವೇಳೆ ಸಿಂಧು ಅವರಿಗೆ ತೀವ್ರ ತಲೆನೋವು ಕಾಣಿಸಿಕೊಂಡಿತು. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾತ್ತು.
ಈ ವೇಳೆ ಅವರಿಗೆ ನರದ ಸಮಸ್ಯೆ ಉಂಟಾಗಿರುವುದು ಪತ್ತೆಯಾಯಿತು. ಮರುದಿನ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಮೆದುಳಿನ ರಕ್ತ ಸ್ರಾವ ಉಂಟಾದ ಹಿನ್ನೆಲೆಯಲ್ಲಿ ಶಸ್ತ್ರ ಚಿಕಿತ್ಸೆಯನ್ನೂ ನಡೆಸಲಾಯಿತು. ಒಮ್ಮೆ ಪ್ರಜ್ಞೆ ಬಂದಿತ್ತಾದರೂ ಬಳಿಕ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡು ಕೋಮಾಗೆ ಜಾರಿದ್ದರು.
ಯುವತಿಯ ಮೆದುಳು ಸಂಪೂರ್ಣವಾಗಿ ನಿಷ್ಕ್ರಿಯಗೊಂಡರೂ, ಯಂತ್ರಗಳ ಸಹಾಯದಿಂದ ಹೃದಯ, ಶ್ವಾಸಕೋಶ, ಕಿಡ್ನಿ, ಲಿವರ್, ಕಣ್ಣುಗಳು ಮುಂತಾದ ಪ್ರಮುಖ ಅಂಗಾಂಗಳನ್ನು ಉಳಿಸಲಾಗಿದೆ. ಈ ಅಂಗಗಳನ್ನು ದಾನ ಮಾಡುವುದರಿಂದ ಇತರರಿಗೆ ಜೀವದಾನ ಮಾಡಿದಂತಾಗುತ್ತದೆ ಎಂದು ಮೃತ ಯುವತಿಯ ತಾಯಿ ಮಮತಾ ಅವರು ಮನೆಯ ಉಳಿದವರೊಂದಿಗೆ ಚರ್ಚಿಸಿ ಅಂಗಾಂಗಗಳನ್ನು ದಾನಮಾಡುವ ನಿರ್ಧಾರ ಕೈಗೊಂಡರು. ಅದರಂತೆ ಮೈಸೂರಿನ ಅಪೋಲೋ ಆಸ್ಪತ್ರೆ, ನಿಟ್ಟೆ, ಎ.ಜೆ. ಮತ್ತು ಕೆ.ಎಂ.ಸಿ. ಆಸ್ಪತ್ರೆಗಳಿಗೆ ಅಂಗಾಂಗ ದಾನ ಮಾಡಲಾಯಿತು.
ಅಂಗಾಂಗ ದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಸಿಂಧು ಅವರ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ಸಿದ್ದಕಟ್ಟೆಯಲ್ಲಿರುವ ಮಾವ ರಾಜೇಶ್ ಅವರ ಮನೆಯಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…