Featured

ಸುಳ್ಯ: ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆಯುತ್ತೇನೆ , ನನ್ನ ನಿರ್ಧಾರ ಬದಲಾಯಿಸಿದ್ದೇನೆ : ಸಚಿವ ಎಸ್.ಅಂಗಾರ – Vishwanews24

ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆಯುತ್ತೇನೆ ..

ನನ್ನ ನಿರ್ಧಾರ ಬದಲಾಯಿಸಿದ್ದೇನೆ ..

ಬಿಜೆಪಿ ಸ್ಪರ್ಧಿ ಭಾಗೀರಥಿ ಮುರುಳ್ಯ ಅವರಿಗೆ ನನ್ನ ಸಂಪೂರ್ಣ ಬೆಂಬಲ.. ಸಚಿವ ಎಸ್.ಅಂಗಾರ

ಸುಳ್ಯ: ಬಿಜೆಪಿ ಅಭ್ಯರ್ಥಿ ಘೋಷಣೆ ವೇಳೆ ಅಭ್ಯರ್ಥಿ ಸ್ಥಾನ ಸಿಗದ ನೋವಿನಿಂದ ಅಂದಿನ ದಿನದ ರಾಜಕೀಯ ನಿವೃತ್ತಿ ಹೇಳಿಕೆ ನೀಡಿದ್ದೇನೆ. ಆದರೆ ಬಳಿಕ ನನ್ನ ನಿರ್ಧಾರ ಬದಲಾಯಿಸಿದ್ದೇನೆ. ಮುಂದೆಯೂ ಬಿಜೆಪಿ ಪಕ್ಷದಲ್ಲಿದ್ದುಕೊಂಡು ಪಕ್ಷದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಗೆಲುವಿಗೆ ಸಂಪೂರ್ಣವಾಗಿ ತೊಡಗಿಕೊಂಡು ಪೂರಕ ಕೆಲಸ ಮಾಡುತ್ತೇನೆ ಎಂದು ಸಚಿವ ಎಸ್.ಅಂಗಾರ ತಿಳಿಸಿದರು.

ಅವರು ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಹೇಳಿಕೆ ನೀಡಿದರು‌. ರಾಜಕೀಯ ನಿವೃತ್ತಿ ಹೇಳಿಕೆ ಹಿಂಪಡೆಯುತ್ತೇನೆ ಎಂದು ತಿಳಿಸಿದರು.

7 ಬಾರಿ ಸ್ಪರ್ಧೆ ಮಾಡಿದಾಗಲೂ ನಾನೆಂದೂ ನನಗೆ ಟಿಕೆಟ್ ಕೊಡಿ ಎಂದು ಕೇಳಕೊಂಡವನಲ್ಲ. ಟಿಕೆಟ್ ಗಾಗಿ ಲಾಬಿ ಮಾಡಿದವನೂ ಅಲ್ಲ. ಇಷ್ಟು ಬಾರಿಯೂ ಪಕ್ಷವೇ ನನಗೆ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿತ್ತು. ನನ್ನ ಸಾರ್ವಜನಿಕ ಜೀವನದಲ್ಲಿ ನಾನೆಂದೂ ಭ್ರಷ್ಟಾಚಾರ, ಸ್ವಜನ ಪಕ್ಷಪಾತ ಮಾಡಿದವನೂ ಅಲ್ಲ. ನನ್ನ ಜೀವನ ತೆರೆದ ಪುಸ್ತಕ ಯಾರು ಬೇಕಾದರೂ ಓದಬಹುದಿತ್ತು ಎಂದರು.

ಈ ಬಾರಿಯೂ ನಾನು ಟಿಕೆಟ್ ಕೊಟ್ಟರೆ ಸ್ಪರ್ಧಿಸುವೆ ಎಂಬ ಹೇಳಿಕೆಯನ್ನು ಕೊಟ್ಟಿದ್ದೆ. ಬದಲಾವಣೆ ಮಾತುಕತೆ ಇಲ್ಲದ ಕಾರಣ ನಾನು ನಿರಾಳನಾಗಿದ್ದೆ. ಏಪ್ರಿಲ್ 11ರ ರಾತ್ರಿ ಟಿ.ವಿ. ನೋಡಿದಾಗಲೇ ನನಗೆ ಅವಕಾಶವಿಲ್ಲ ಎಂಬ ಮಾಹಿತಿ ಸಿಕ್ಕಿತ್ತು. ಇದರಿಂದ ನನ್ನ ಮನಸ್ಸಿಗೆ ತೀವ್ರ ಆಘಾತವಾಯಿತು. ಯಾರಲ್ಲಿ ಏನು ಹೇಳಬೇಕೆಂದೂ ಹೊಳೆಯಲಿಲ್ಲ. ಹೀಗಾಗಿ 12 ರಂದು ಬೆಳಗ್ಗೆ ನಾನು ಗೊಂದಲದಿಂದ ನನ್ನ ನಿರ್ಧಾರವನ್ನು ಪ್ರಕಟ ಮಾಡಿದೆ ಎಂದು ಹೇಳಿದರು.

ಅವರು ಒಬ್ಬ ಮನೆ ಕೆಲಸದವನ್ನು ಇಡುವಾಗಲೂ ಗಡುವು ಹಾಕಿ ತಿಳಿಸುವ ವ್ಯವಸ್ಥೆ ಇದೆ. 36 ವರ್ಷ ತೊಡಗಿಸಿಕೊಂಡ ನಾನು ಪರಿಸ್ಥಿತಿಯ ಬಗ್ಗೆ ನನಗೇ ಏನೂ ತೋಚದಂತಾಯಿತು ಎಂದು ತಿಳಿಸಿದರು.

ಬಳಿಕ ನನ್ನ ಬಗ್ಗೆ ಬೇರೆ ಬೇರೆ ರೀತಿಯಲ್ಲಿ ಚರ್ಚೆ ಆರಂಭವಾಗಿರುವುದು ಗಮನಿಸಿದ್ದೇನೆ. ಇದರಿಂದಾಗಿ ನನ್ನ ಕ್ಷೇತ್ರದ ಮತದಾರರಿಗೆ , ಕಾರ್ಯಕರ್ತರಿಗೆ, ಅಭಿಮಾನಿಗಳಿಗೆ ತಪ್ಪು ಸಂದೇಶ ಹೋಗುತ್ತಿರುವುದು ಸರಿಯಲ್ಲ. ನಿಜ ಸಂಗತಿ ತಿಳಿಸುವುದು ಅಗತ್ಯ ಅನ್ನಿಸಿದ್ದರಿಂದ ನಾನು ಈ ಹೇಳಿಕೆ ನೀಡುತ್ತಿದ್ದೇನೆ ಎಂದರು.

ರಾಜಕೀಯದಲ್ಲಿ ಇಲ್ಲದಿದ್ದರೂ ಸಮಾಜದ ಮಧ್ಯೆ ನನ್ನ ಕೆಲಸ, ಕರ್ತವ್ಯ ನಿಲ್ಲುವುದಿಲ್ಲ. ಚುನಾಯಿತನಾಗುವ ಮೊದಲೂ ಸಮಾಜದೊಂದಿಗಿದ್ದೆ, ಇನ್ನು ಮುಂದೆಯೂ ಸಮಾಜದ ಜೊತೆಗಿರುತ್ತೇನೆ. ಕ್ಷೇತ್ರದ ಜನ ಸಮಸ್ಯೆ ಹೊತ್ತು ನನ್ನ ಬಳಿ ಬಂದಾಗ ನನ್ನ ಸಹಾಯ ನೀಡಲು ಹಿಂದಿನಂತೆಯೇ ಬದ್ಧನಿದ್ದೇನೆ ಎಂದರು.

ಬಿಜೆಪಿ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ, ಪ್ರಮುಖರಾದ ವೆಂಕಟ್ ವಳಲಂಬೆ, ವೆಂಕಟ್ ದಂಬೆಕೋಡಿ ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

16 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

17 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

17 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

18 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

18 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

3 days ago