ಸುಳ್ಯ: ಸುಳ್ಯ ಜಯನಗರದ ಮಹಿಳೆಗೆ ವಿದೇಶದಲ್ಲಿರುವ ಪತಿ ವಾಟ್ಸಪ್ ಸಂದೇಶದ ಮೂಲಕ ತ್ರಿವಳಿ ತಲಾಖ್ ನೀಡಿರುವ ಘಟನೆ ನಡೆದಿದೆ.
ಈ ಬಗ್ಗೆ ಮಹಿಳೆ ಸುಳ್ಯ ಪೊಲೀಸ್ ಠಾಣೆಗೆ ಪತಿಯ ವಿರುದ್ಧ ದೂರು ನೀಡಿದ್ದಾರೆ. ಕೇರಳ ತ್ರಿಶೂರ್ ಮೂಲದ ಅಬ್ದುಲ್ ರಾಶಿದ್ ಎಂಬವರು ಏಳು ವರ್ಷಗಳ ಹಿಂದೆ ಸುಳ್ಯ ಜಯನಗರದ ಯುವತಿಯನ್ನು ವಿವಾಹವಾಗಿದ್ದರು.
ವಿವಾಹದ ಬಳಿಕ ಚೆನ್ನಾಗಿ ಜೇವನ ಸಾಗಿಸುತ್ತಿದ್ದು, ಈ ದಂಪತಿಗಳಿಗೆ ಇಬ್ಬರು ಹೆಣ್ಣುಮಕ್ಕಳಿದ್ದಾರೆ. ಎರಡು ವರ್ಷಗಳ ಹಿಂದೆ ರಾಶಿದ್ ತನ್ನ ಪತ್ನಿಯನ್ನು ವಿದೇಶಕ್ಕೆ ಕರೆಸಿಕೊಂಡಿದ್ದರು. ಬಳಿಕ ಎರಡನೇ ಮಗುವಿನ ಹೆರಿಗೆಗಾಗಿ ಪತ್ನಿಯನ್ನು ಸುಳ್ಯದ ಪತ್ನಿ ಮನೆಯಲ್ಲಿ ಬಿಟ್ಟು ವಿದೇಶಕ್ಕೆ ಉದ್ಯೋಗಕ್ಕೆ ತರೆಳಿದ್ದರು.
ಕಳೆದ ಆರು ತಿಂಗಳಿನಿಂದ ಸಂಸಾರದಲ್ಲಿ ಅಲ್ಪ ಸ್ವಲ್ಪ ಕಿರಿಕಿರಿ ಉಂಟಾಗಿತ್ತು ಎನ್ನಲಾಗಿದ್ದು ಆದರೆ ಸಂಬಂಧಿಕರು, ಹಿರಿಯರು ಇದರ ಬಗ್ಗೆ ಮಾತನಾಡಿ ಸರಿಪಡಿಸಲು ಪ್ರಯತ್ನಿಸಿದ್ದರು. ಆದರೆ ಇದು ಯಾವುದನ್ನು ಕೇಳದೆ ಏಕಾಏಕಿ ಪತಿ ರಾಶಿದ್, ಪತ್ನಿಯ ಮೊಬೈಲ್ಗೆ ಮೂರು ತಲಾಖ್ನ ವಾಟ್ಸಾಪ್ ಸಂದೇಶ ಕಳುಹಿಸಿದ್ದಾರೆ. ಇದರಿಂದ ಮನನೊಂದ ಮಹಿಳೆ ಸುಳ್ಯ ಪೊಲೀಸರಿಗೆ ತನಗೆ ನ್ಯಾಯ ಕೊಡಿಸುವಂತೆ ದೂರು ನೀಡಿದ್ದಾರೆ. ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…