ಸುಳ್ಯ:ಜೆಸಿಬಿ ಮೂಲಕ ಅಗೆತ ವೇಳೆ ಸುರಂಗ ಮಾದರಿ ಪತ್ತೆಯಾಗಿರುವ ಕುತೂಹಲಕಾರಿ ಘಟನೆ ಸುಳ್ಯ ತಾಲೂಕಿನ ಕಲ್ಮಕಾರು ಎಂಬಲ್ಲಿ ನಡೆದಿದೆ.
ಕಲ್ಮಕಾರು ಗ್ರಾಮದ ಬಿಳಿಮಲೆ ಉಮೇಶ್ ಎಂಬವರಿಗೆ ಸೇರಿದ ಜಮೀನಿನ ರಬ್ಬರ್ ತೋಟದಲ್ಲಿ ಜೆಸಿಬಿ ಮೂಲಕ ಅಗೆತ ನಡೆಸುವ ವೇಳೆ ಮಾದರಿ ಪತ್ತೆಯಾಗಿದೆ. ಉಮೇಶ್ ಅವರು ತಮ್ಮ ರಬ್ಬರ್ ತೋಟದಲ್ಲಿ ಅಗೆತ ಮಾಡಿ ಅರಣ್ಯ ಕೃಷಿ ಉದ್ದೇಶದಿಂದ ಜೆಸಿಬಿ ಕೆಲಸ ಆರಂಭಿಸಿದ್ದರು.
ಜಮೀನಿನಲ್ಲಿ ಪೊದೆ, ಮುಳ್ಳುಗಳಿಂದ ಕೂಡಿದ್ದ ಜಾಗದಲ್ಲಿ ಅಗೆತ ವೇಳೆ ಮುಚ್ಚಳದ ಮಾದರಿ ಪತ್ತೆಯಾಗಿದ್ದು, ಅದನ್ನು ತೆಗೆದ ವೇಳೆ ಸುರಂಗ ಪತ್ತೆಯಾಗಿದ್ದು, ಒಳಭಾಗ ದೊಡ್ಡಗಾತ್ರದ ಸ್ನಾನದ ಹಂಡೆ ಮಾದರಿಯಲ್ಲಿದೆ, ಸುಮಾರು ೬ ಫೀಟ್ ಎತ್ತರ ಆಳವಿದೆ. ಕೆತ್ತನೆ ಮೂಲಕ ನಿರ್ಮಿಸಿರುವುದು ಕಂಡುಬಂದಿದೆ. ಹಿಂದಿನ ಕಾಲದಲ್ಲಿ ಅಡಗು ತಾಣವಾಗಿ ನಿರ್ಮಿಸಲಾದ ತಾಣ ಇದು ಇರಬಹುದು ಎಂದು ಶಂಕಿಸಲಾಗಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…