Featured

ಸುಳ್ಯ :  ಶ್ರೀ ಚೆನ್ನಕೇಶವ ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಮುಕ್ತ ಅವಕಾಶ: ಜಾತ್ರೋತ್ಸವದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ – Vishwanews24

ಸುಳ್ಯ :  ಶ್ರೀ ಚೆನ್ನಕೇಶವ ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಮುಕ್ತ ಅವಕಾಶ: ಜಾತ್ರೋತ್ಸವದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ

ಸುಳ್ಯ : ಈ ಬಾರಿಯ ಶ್ರೀ ಚೆನ್ನಕೇಶವ ದೇವರ ಈ ಹಿಂದೆ ಯಾವ ರೀತಿ ಸಂತೆ ಏಲಂ ಆಗುತ್ತಿತ್ತೋ ಹಾಗೆಯೇ ಮುಂದುವರಿಸಿ ಎಲ್ಲರಿಗೂ ಮುಕ್ತ ಅವಕಾಶ ನೀಡಲು ಜಾತ್ರೋತ್ಸವದ ಪೂರ್ವಭಾವಿ ಸಭೆಯಲ್ಲಿ ನಿರ್ಣಯಿಸಲಾಗಿದೆ. ಜಾತ್ರೋತ್ಸವದ ಬಗ್ಗೆ ಚರ್ಚಿಸಲು ಜ.2 ರಂದು ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಇದಕ್ಕೂ ಮೊದಲು ಜಾತ್ರೋತ್ಸವದಲ್ಲಿ ಸಂತೆ ವ್ಯಾಪಾರಕ್ಕೆ ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಹಿಂದೂ ಜಾಗರಣಾ ವೇದಿಕೆ ಮನವಿ ದೇವಸ್ಥಾನ ಆಡಳಿತ ಸಮಿತಿಗೆ ಮನವಿ ಮಾಡಿತ್ತು. ಆದರೆ ಸಭೆಯಲ್ಲಿ ಸಂತೆ ವ್ಯಾಪಾರಕ್ಕೆ ಮುಕ್ತ ಅವಕಾಶ ನೀಡಿರುವುದರಿಂದ ಹಿಂಜಾವೇ ಹಿಂಜಾವೇ ಗೆ‌ ಹಿನ್ನಡೆಯಾಗಿದೆ.

ಅಂಗಡಿಗಳ ಏಲಂ ಬಗ್ಗೆ ದಾಮೋದರ ಮಂಚಿ ಮತ್ತು ರವಿ ಮತ್ತಿತರರು ವಿಷಯ ಪ್ರಸ್ತಾಪಿಸಿದರು. ಅದಕ್ಕೆ ಉತ್ತರಿಸಿದ ಕೃಪಾಶಂಕರ ಅಂಗಡಿಗಳ ಏಲಂ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯ ನಿಯಮದಂತೆ ಮಾಡಿದ್ದೇವೆ ಎಂದು ಹೇಳಿದರು. ಆಗ ವೆಂಕಪ್ಪ ಗೌಡ, ಪಿ.ಎಸ್.ಗಂಗಾಧರ್, ಜಯಪ್ರಕಾಶ್ ರೈ, ಗೋಕುಲದಾಸ್ ಮತ್ತಿತರರು ಇಲಾಖೆಯ ನಿಯಮದಲ್ಲಿ ಏನೇನಿದೆ ಓದಿ ಹೇಳಿ ಎಂದು ಹೇಳಿದರು. ಧಾರ್ಮಿಕ ದತ್ತಿ ಇಲಾಖೆಯ ನಿಯಮವನ್ನು ಓದಿ ಅದರಲ್ಲಿ ದೇವಸ್ಥಾನಕ್ಕೆ ಸಂಬಂದಪಟ್ಟ ಕಟ್ಟಡದಲ್ಲಿ ಟೆಂಡರ್‌ನ್ನು ಇತರರಿಗೆ ನೀಡಬಾರದೆಂದು ಇತ್ತು. ಹೊರಗಿನ ಸಂತೆ ಏಲಂ ಬಗ್ಗೆ ಯಾವುದೇ ನಿಬಂಧನೆಗಳು ಇರಲಿಲ್ಲ. ಈ ಹಿನ್ನಲೆಯಲ್ಲಿ ಹಿಂದೆ‌ ಇದ್ದ ರೀತಿಯಲ್ಲಿ ಏಲಂ ಮಾಡಲು ನಿರ್ಧರಿಸಲಾಯಿತು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago