Featured

ಸುಳ್ಯ :  ಶ್ರೀ ಚೆನ್ನಕೇಶವ ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಮುಕ್ತ ಅವಕಾಶ: ಜಾತ್ರೋತ್ಸವದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ – Vishwanews24

ಸುಳ್ಯ :  ಶ್ರೀ ಚೆನ್ನಕೇಶವ ಜಾತ್ರೋತ್ಸವದಲ್ಲಿ ಅನ್ಯಧರ್ಮೀಯರಿಗೆ ವ್ಯಾಪಾರಕ್ಕೆ ಮುಕ್ತ ಅವಕಾಶ: ಜಾತ್ರೋತ್ಸವದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ

ಸುಳ್ಯ : ಈ ಬಾರಿಯ ಶ್ರೀ ಚೆನ್ನಕೇಶವ ದೇವರ ಈ ಹಿಂದೆ ಯಾವ ರೀತಿ ಸಂತೆ ಏಲಂ ಆಗುತ್ತಿತ್ತೋ ಹಾಗೆಯೇ ಮುಂದುವರಿಸಿ ಎಲ್ಲರಿಗೂ ಮುಕ್ತ ಅವಕಾಶ ನೀಡಲು ಜಾತ್ರೋತ್ಸವದ ಪೂರ್ವಭಾವಿ ಸಭೆಯಲ್ಲಿ ನಿರ್ಣಯಿಸಲಾಗಿದೆ. ಜಾತ್ರೋತ್ಸವದ ಬಗ್ಗೆ ಚರ್ಚಿಸಲು ಜ.2 ರಂದು ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ಇದಕ್ಕೂ ಮೊದಲು ಜಾತ್ರೋತ್ಸವದಲ್ಲಿ ಸಂತೆ ವ್ಯಾಪಾರಕ್ಕೆ ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಹಿಂದೂ ಜಾಗರಣಾ ವೇದಿಕೆ ಮನವಿ ದೇವಸ್ಥಾನ ಆಡಳಿತ ಸಮಿತಿಗೆ ಮನವಿ ಮಾಡಿತ್ತು. ಆದರೆ ಸಭೆಯಲ್ಲಿ ಸಂತೆ ವ್ಯಾಪಾರಕ್ಕೆ ಮುಕ್ತ ಅವಕಾಶ ನೀಡಿರುವುದರಿಂದ ಹಿಂಜಾವೇ ಹಿಂಜಾವೇ ಗೆ‌ ಹಿನ್ನಡೆಯಾಗಿದೆ.

ಅಂಗಡಿಗಳ ಏಲಂ ಬಗ್ಗೆ ದಾಮೋದರ ಮಂಚಿ ಮತ್ತು ರವಿ ಮತ್ತಿತರರು ವಿಷಯ ಪ್ರಸ್ತಾಪಿಸಿದರು. ಅದಕ್ಕೆ ಉತ್ತರಿಸಿದ ಕೃಪಾಶಂಕರ ಅಂಗಡಿಗಳ ಏಲಂ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯ ನಿಯಮದಂತೆ ಮಾಡಿದ್ದೇವೆ ಎಂದು ಹೇಳಿದರು. ಆಗ ವೆಂಕಪ್ಪ ಗೌಡ, ಪಿ.ಎಸ್.ಗಂಗಾಧರ್, ಜಯಪ್ರಕಾಶ್ ರೈ, ಗೋಕುಲದಾಸ್ ಮತ್ತಿತರರು ಇಲಾಖೆಯ ನಿಯಮದಲ್ಲಿ ಏನೇನಿದೆ ಓದಿ ಹೇಳಿ ಎಂದು ಹೇಳಿದರು. ಧಾರ್ಮಿಕ ದತ್ತಿ ಇಲಾಖೆಯ ನಿಯಮವನ್ನು ಓದಿ ಅದರಲ್ಲಿ ದೇವಸ್ಥಾನಕ್ಕೆ ಸಂಬಂದಪಟ್ಟ ಕಟ್ಟಡದಲ್ಲಿ ಟೆಂಡರ್‌ನ್ನು ಇತರರಿಗೆ ನೀಡಬಾರದೆಂದು ಇತ್ತು. ಹೊರಗಿನ ಸಂತೆ ಏಲಂ ಬಗ್ಗೆ ಯಾವುದೇ ನಿಬಂಧನೆಗಳು ಇರಲಿಲ್ಲ. ಈ ಹಿನ್ನಲೆಯಲ್ಲಿ ಹಿಂದೆ‌ ಇದ್ದ ರೀತಿಯಲ್ಲಿ ಏಲಂ ಮಾಡಲು ನಿರ್ಧರಿಸಲಾಯಿತು.

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

4 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

4 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

4 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

4 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

1 day ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 day ago