ಸುಳ್ಯ : ಈ ಬಾರಿಯ ಶ್ರೀ ಚೆನ್ನಕೇಶವ ದೇವರ ಈ ಹಿಂದೆ ಯಾವ ರೀತಿ ಸಂತೆ ಏಲಂ ಆಗುತ್ತಿತ್ತೋ ಹಾಗೆಯೇ ಮುಂದುವರಿಸಿ ಎಲ್ಲರಿಗೂ ಮುಕ್ತ ಅವಕಾಶ ನೀಡಲು ಜಾತ್ರೋತ್ಸವದ ಪೂರ್ವಭಾವಿ ಸಭೆಯಲ್ಲಿ ನಿರ್ಣಯಿಸಲಾಗಿದೆ. ಜಾತ್ರೋತ್ಸವದ ಬಗ್ಗೆ ಚರ್ಚಿಸಲು ಜ.2 ರಂದು ದೇವಸ್ಥಾನದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಇದಕ್ಕೂ ಮೊದಲು ಜಾತ್ರೋತ್ಸವದಲ್ಲಿ ಸಂತೆ ವ್ಯಾಪಾರಕ್ಕೆ ಮುಸ್ಲಿಮರಿಗೆ ಅವಕಾಶ ನೀಡಬಾರದು ಎಂದು ಹಿಂದೂ ಜಾಗರಣಾ ವೇದಿಕೆ ಮನವಿ ದೇವಸ್ಥಾನ ಆಡಳಿತ ಸಮಿತಿಗೆ ಮನವಿ ಮಾಡಿತ್ತು. ಆದರೆ ಸಭೆಯಲ್ಲಿ ಸಂತೆ ವ್ಯಾಪಾರಕ್ಕೆ ಮುಕ್ತ ಅವಕಾಶ ನೀಡಿರುವುದರಿಂದ ಹಿಂಜಾವೇ ಹಿಂಜಾವೇ ಗೆ ಹಿನ್ನಡೆಯಾಗಿದೆ.
ಅಂಗಡಿಗಳ ಏಲಂ ಬಗ್ಗೆ ದಾಮೋದರ ಮಂಚಿ ಮತ್ತು ರವಿ ಮತ್ತಿತರರು ವಿಷಯ ಪ್ರಸ್ತಾಪಿಸಿದರು. ಅದಕ್ಕೆ ಉತ್ತರಿಸಿದ ಕೃಪಾಶಂಕರ ಅಂಗಡಿಗಳ ಏಲಂ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯ ನಿಯಮದಂತೆ ಮಾಡಿದ್ದೇವೆ ಎಂದು ಹೇಳಿದರು. ಆಗ ವೆಂಕಪ್ಪ ಗೌಡ, ಪಿ.ಎಸ್.ಗಂಗಾಧರ್, ಜಯಪ್ರಕಾಶ್ ರೈ, ಗೋಕುಲದಾಸ್ ಮತ್ತಿತರರು ಇಲಾಖೆಯ ನಿಯಮದಲ್ಲಿ ಏನೇನಿದೆ ಓದಿ ಹೇಳಿ ಎಂದು ಹೇಳಿದರು. ಧಾರ್ಮಿಕ ದತ್ತಿ ಇಲಾಖೆಯ ನಿಯಮವನ್ನು ಓದಿ ಅದರಲ್ಲಿ ದೇವಸ್ಥಾನಕ್ಕೆ ಸಂಬಂದಪಟ್ಟ ಕಟ್ಟಡದಲ್ಲಿ ಟೆಂಡರ್ನ್ನು ಇತರರಿಗೆ ನೀಡಬಾರದೆಂದು ಇತ್ತು. ಹೊರಗಿನ ಸಂತೆ ಏಲಂ ಬಗ್ಗೆ ಯಾವುದೇ ನಿಬಂಧನೆಗಳು ಇರಲಿಲ್ಲ. ಈ ಹಿನ್ನಲೆಯಲ್ಲಿ ಹಿಂದೆ ಇದ್ದ ರೀತಿಯಲ್ಲಿ ಏಲಂ ಮಾಡಲು ನಿರ್ಧರಿಸಲಾಯಿತು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…