Featured

ಸುಳ್ಯ: ಸಚಿವ ಎಸ್.ಅಂಗಾರ ಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕಾರದ ಕೂಗು – Vishwanews24

ಸುಳ್ಯ: ಸಚಿವ ಎಸ್.ಅಂಗಾರ ಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕಾರದ ಕೂಗು

ಸುಳ್ಯ: ಕಳೆದ 30 ವರ್ಷಗಳಿಂದ ಆರು ಬಾರಿ ಶಾಸಕರಾಗಿರುವ ಸಚಿವ ಎಸ್‌.ಅಂಗಾರ ಪ್ರತಿನಿಧಿಸುತ್ತಿರುವ ಸುಳ್ಯ ತಾಲೂಕಿನ ಅರಂತೋಡು ಗ್ರಾಮದಲ್ಲಿ ಹೊಳೆ ದಾಟಲು ಸೇತುವೆ ಇಲ್ಲದ ಹಿನ್ನೆಲೆಯಲ್ಲಿ ಅರಮನೆಗಯ ಪ್ರದೇಶದ ಹಾಗೂ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಮುಂಬರುವ ವಿಧಾನ ಸಭಾ ಚುನಾವಣೆಯನ್ನು ಬಹಿಷ್ಕರಿಸಲು ನಿರ್ಧರಿಸಿದ್ದಾರೆ.

ಅರಮನೆಗಯ ಅನ್ನುವ ಪ್ರದೇಶ ಅಂಗಾರ ಅವರ ಕ್ಷೇತ್ರವಾಗಿದ್ದು, ಈ ಊರಿನಲ್ಲೇ ನಡುವೆ ಹರಿಯುವ ಹೊಳೆಗೆ ಸೇತುವೆ ಇಲ್ಲ. ಇಲ್ಲೊಂದು ಸೇತುವೆ ಆಗಬೇಕೆಂದು ಪರಿಸರದ ನಿವಾಸಿಗಳು 30 ವರ್ಷಗಳಿಂದ ಬೇಡಿಕೆ ಸಲ್ಲಿಸುತ್ತ ಬಂದಿದ್ದಾರೆ.

ಕಳೆದ 30 ವರ್ಷಗಳಿಂದ ಹೊಳೆ ದಾಟಲು ಇರುವ ಏಕೈಕ ಮಾರ್ಗವಾಗಿರುವ ಮರದ ಸೇತುವೆ ಮಳೆಗಾಲದಲ್ಲಿ ಆಗಾಗ ಹಾನಿಗೊಳಗಾಗುತ್ತದೆ. ಇದರಿಂದ ಗ್ರಾಮಸ್ಥರು ಐದು ಕಿಲೋಮೀಟರ್ ದೂರದಲ್ಲಿರುವ ಪಟ್ಟಣಕ್ಕೆ ಬರಲು ಪರ್ಯಾಯ ಮಾರ್ಗದಲ್ಲಿ ಹೋಗಬೇಕಾದ ಅನಿವಾರ್ಯತೆ ಇದೆ. ಈ ಪರ್ಯಾಯ ಮಾರ್ಗವು 15 ಕಿಲೋಮೀಟರ್‌ಗೆ ವಿಸ್ತರಿಸುವುದರಿಂದ ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಹಾಗೂ ನಿವಾಸಿಗಳಿಗೆ ತೊಂದರೆಯಾಗುತ್ತಿದೆ.

ಇನ್ನು ಅಸ್ತಿತ್ವದಲ್ಲಿರುವ ಮರದ ಸೇತುವೆಯ ಸುರಕ್ಷತೆಯ ಬಗ್ಗೆ ಚಿಕ್ಕ ಮಕ್ಕಳ ಪೋಷಕರು ವಿಶೇಷವಾಗಿ ಕಾಳಜಿ ವಹಿಸುತ್ತಾರೆ. ಸೇತುವೆಯ ಕೊರತೆಯಿಂದಾಗಿ ಈ ಭಾಗದಲ್ಲಿ ಅಗತ್ಯ ಮೂಲಸೌಕರ್ಯ ನಿರ್ಮಾಣಕ್ಕೂ ಅಡ್ಡಿಯಾಗಿದ್ದು, ಗ್ರಾಮಸ್ಥರ ಸ್ಥಿತಿ ಹೇಳ ತೀರದಂತಿದೆ. ಇದರಿಂದ ಗ್ರಾಮಸ್ಥರು ಮತದಾನ ಬಹಿಷ್ಕರಿಸಲು ನಿರ್ಧರಿಸಿದ್ದಾರೆ. ಅರಮನೆಗಯ ಸೇತುವೆ ಬೇಡಿಕೆ ಇಡೇರುವ ತನಕ ಮತದಾನ ಬಹಿಷ್ಕರಿಸುವುದಾಗಿ ಹೇಳಿ ಮನೆ ಮನೆಗಳಲ್ಲಿ ಬ್ಯಾನರ್, ಭಿತ್ತಿಪತ್ರಗಳನ್ನು ಅಂಟಿಸಲಾಗಿದೆ ಎಂದರು.

ಇನ್ನು ಗ್ರಾಮದಲ್ಲಿ ಮೂಲ ಸೌಕರ್ಯಗಳಿಲ್ಲದಿರುವುದು ಆತಂಕಕ್ಕೆ ಕಾರಣವಾಗಿದ್ದು, ಬಹಿಷ್ಕಾರದಿಂದ ತಮ್ಮ ಸಂಕಷ್ಟದ ಬಗ್ಗೆ ಗಮನ ಹರಿಸಿ ಅಧಿಕಾರಿಗಳು ಕ್ರಮಕೈಗೊಳ್ಳಬೇಕು ಎಂಬುದು ನಿವಾಸಿಗಳ ಆಶಯವಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

3 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

3 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago