ಸುಳ್ಯ,: ಹಿಂದೂ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ್ದ ಮುಸ್ಲಿಂ ವಿದ್ಯಾರ್ಥಿಗೆ ಅದೇ ಕಾಲೇಜಿನ ವಿದ್ಯಾರ್ಥಿಗಳ ತಂಡವೊಂದು ಹಿಗ್ಗಾಮುಗ್ಗ ಥಳಿಸಿ ಜೀವಬೆದರಿಕೆಯೊಡ್ಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕಸಬಾ ಗ್ರಾಮದ ಕೊಡಿಯಾಲಬೈಲು ಎಂಬಲ್ಲಿ ನಿನ್ನೆ ನಡೆದಿದೆ.
ಆರೋಪಿಗಳನ್ನು ದೀಕ್ಷಿತ್ (ಬಿಬಿಎ) ಮತ್ತು ಧನುಷ್(ಬಿಬಿಎ ) ಪ್ರಜ್ವಲ್, (ಅಂತಿಮ ವರ್ಷದ ಬಿಬಿಎ) ತನುಜ್ (ಅಂತಿಮ ವರ್ಷದ ಬಿಕಾಂ) ಅಕ್ಷಯ್ (ದ್ವಿತಿಯ ವರ್ಷದ ಬಿಕಾಂ) ಮೋಕ್ಷಿತ್ (ಅಂತಿಮ ವರ್ಷದ ಬಿಕಾಂ) ಹಾಗೂ ಸುಳ್ಯದ ಎನ್ ಎಂಸಿ ಕಾಲೇಜಿನ ಗೌತಮ್ ಎಂದು ಗುರುತಿಸಲಾಗಿದೆ.
ವಿದ್ಯಾರ್ಥಿ ಮಹಮ್ಮದ್ ಸನೀಫ್ ಸುಳ್ಯ ಕಸಬಾ ಗ್ರಾಮದ ಕೊಡಿಯಾಲಬೈಲು ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ,ಕಾಂ ಪದವಿ ಕಲಿಯುತ್ತಿದ್ದು, ಆತನಿಗೆ ಅದೇ ಕಾಲೇಜಿನ ಹಿಂದೂ ವಿದ್ಯಾರ್ಥಿನಿಯೊಬ್ಬಳ ಜೊತೆ ಸ್ನೇಹ ಸಂಬಂಧವಿತ್ತು. ಇದು ಕೆಲ ಸಹಪಾಠಿಗಳಿಗೆ ಹಿಡಿಸುತ್ತಿರಲಿಲ್ಲ.
ಈ ಹಿನ್ನೆಲೆ ಆ.30 ರಂದು ಬೆಳಗ್ಗೆ 10:30ಕ್ಕೆ ಮಹಮ್ಮದ್ ಸನೀಫ್ ತರಗತಿಗೆ ಬಂದ ದೀಕ್ಷಿತ್ ಮತ್ತು ಧನುಷ್ ಎಂಬುವವರು ಮಾತನಾಡಲು ಇದೆ ಎಂದು ಹೇಳಿ ಕಾಲೇಜಿನ ಗ್ರೌಂಡ್ಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಇನ್ನುಳಿದ ಆರೋಪಿಗಳು ಈತನ ಕಾಲರ್ ಪಟ್ಟಿ ಹಿಡಿದು ನೀನು ಆಕೆಯೊಂದಿಗೆ ಯಾಕೆ ಮಾತನಾಡುತ್ತಿಯಾ ಎಂದು ಪ್ರಶ್ನಿಸಿದ್ದಾರೆ.
ನಂತರ ದೊಣ್ಣೆಯಿಂದ ಹಿಗ್ಗಾಮುಗ್ಗಾ ಥಳಿಸಿ ಇನ್ನು ಮುಂದಕ್ಕೆ ಆಕೆಯೊಂದಿಗೆ ಮಾತನಾಡಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಜೀವಬೆದರಿಕೆಯೊಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸದ್ಯ ವಿದ್ಯಾರ್ಥಿ ಸುಳ್ಯ ಸರ್ಕಾರಿ ಆಸ್ಪತ್ರೆ ತೆರಳಿ ಚಿಕಿತ್ಸೆ ಪಡೆದಿದ್ದಾನೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…