ಸುಳ್ಯ,: ಹಿಂದೂ ವಿದ್ಯಾರ್ಥಿನಿಯೊಂದಿಗೆ ಸ್ನೇಹ ಬೆಳೆಸಿದ್ದ ಮುಸ್ಲಿಂ ವಿದ್ಯಾರ್ಥಿಗೆ ಅದೇ ಕಾಲೇಜಿನ ವಿದ್ಯಾರ್ಥಿಗಳ ತಂಡವೊಂದು ಹಿಗ್ಗಾಮುಗ್ಗ ಥಳಿಸಿ ಜೀವಬೆದರಿಕೆಯೊಡ್ಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಕಸಬಾ ಗ್ರಾಮದ ಕೊಡಿಯಾಲಬೈಲು ಎಂಬಲ್ಲಿ ನಿನ್ನೆ ನಡೆದಿದೆ.
ಆರೋಪಿಗಳನ್ನು ದೀಕ್ಷಿತ್ (ಬಿಬಿಎ) ಮತ್ತು ಧನುಷ್(ಬಿಬಿಎ ) ಪ್ರಜ್ವಲ್, (ಅಂತಿಮ ವರ್ಷದ ಬಿಬಿಎ) ತನುಜ್ (ಅಂತಿಮ ವರ್ಷದ ಬಿಕಾಂ) ಅಕ್ಷಯ್ (ದ್ವಿತಿಯ ವರ್ಷದ ಬಿಕಾಂ) ಮೋಕ್ಷಿತ್ (ಅಂತಿಮ ವರ್ಷದ ಬಿಕಾಂ) ಹಾಗೂ ಸುಳ್ಯದ ಎನ್ ಎಂಸಿ ಕಾಲೇಜಿನ ಗೌತಮ್ ಎಂದು ಗುರುತಿಸಲಾಗಿದೆ.
ವಿದ್ಯಾರ್ಥಿ ಮಹಮ್ಮದ್ ಸನೀಫ್ ಸುಳ್ಯ ಕಸಬಾ ಗ್ರಾಮದ ಕೊಡಿಯಾಲಬೈಲು ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ,ಕಾಂ ಪದವಿ ಕಲಿಯುತ್ತಿದ್ದು, ಆತನಿಗೆ ಅದೇ ಕಾಲೇಜಿನ ಹಿಂದೂ ವಿದ್ಯಾರ್ಥಿನಿಯೊಬ್ಬಳ ಜೊತೆ ಸ್ನೇಹ ಸಂಬಂಧವಿತ್ತು. ಇದು ಕೆಲ ಸಹಪಾಠಿಗಳಿಗೆ ಹಿಡಿಸುತ್ತಿರಲಿಲ್ಲ.
ಈ ಹಿನ್ನೆಲೆ ಆ.30 ರಂದು ಬೆಳಗ್ಗೆ 10:30ಕ್ಕೆ ಮಹಮ್ಮದ್ ಸನೀಫ್ ತರಗತಿಗೆ ಬಂದ ದೀಕ್ಷಿತ್ ಮತ್ತು ಧನುಷ್ ಎಂಬುವವರು ಮಾತನಾಡಲು ಇದೆ ಎಂದು ಹೇಳಿ ಕಾಲೇಜಿನ ಗ್ರೌಂಡ್ಗೆ ಕರೆದುಕೊಂಡು ಹೋಗಿದ್ದಾರೆ. ಅಲ್ಲಿ ಇನ್ನುಳಿದ ಆರೋಪಿಗಳು ಈತನ ಕಾಲರ್ ಪಟ್ಟಿ ಹಿಡಿದು ನೀನು ಆಕೆಯೊಂದಿಗೆ ಯಾಕೆ ಮಾತನಾಡುತ್ತಿಯಾ ಎಂದು ಪ್ರಶ್ನಿಸಿದ್ದಾರೆ.
ನಂತರ ದೊಣ್ಣೆಯಿಂದ ಹಿಗ್ಗಾಮುಗ್ಗಾ ಥಳಿಸಿ ಇನ್ನು ಮುಂದಕ್ಕೆ ಆಕೆಯೊಂದಿಗೆ ಮಾತನಾಡಿದರೆ ನಿನ್ನನ್ನು ಜೀವ ಸಹಿತ ಬಿಡುವುದಿಲ್ಲ ಎಂದು ಜೀವಬೆದರಿಕೆಯೊಡ್ಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಸದ್ಯ ವಿದ್ಯಾರ್ಥಿ ಸುಳ್ಯ ಸರ್ಕಾರಿ ಆಸ್ಪತ್ರೆ ತೆರಳಿ ಚಿಕಿತ್ಸೆ ಪಡೆದಿದ್ದಾನೆ. ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…