ಶೃಂಗೇರಿ: ಸಿ.ಟಿ.ರವಿ ಒಬ್ಬ ದೊಡ್ಡ ಡ್ರಾಮಾ ಮಾಸ್ಟರ್. ಸುಳ್ಳಿಗೆ ಸುಳ್ಳು ಪೋಣಿಸಿ ಕಥೆ ಹೆಣೆಯುವುದರಲ್ಲಿ ನಿಸ್ಸೀಮ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಟೀಕಿಸಿದ್ದಾರೆ.
ಸಿ.ಟಿ.ರವಿ ಅವರಿಗೆ ಬೆದರಿಕೆ ಪತ್ರ ಸಂಬಂಧ ಮಾಧ್ಯಮದವರ ಪ್ರಶ್ನಗೆ ಪ್ರತಿಕ್ರಿಯಿಸಿದ ಅವರು, “ಸಿ.ಟಿ.ರವಿ ದೊಡ್ಡ ಡ್ರಾಮಾ ಮಾಸ್ಟರ್ ಆಗಿದ್ದಾರೆ. ಅವರನ್ನು ರಾಷ್ಟ್ರೀಯ ನಾಯಕರು, ಬಿಜೆಪಿ ರಾಷ್ಟ್ರೀಯ ಪದಾಧಿಕಾರಿ ಎಂದು ಭಾವಿಸಿದ್ದೆ. ಅವರ ಮಾತು, ವಿಚಾರ ನೋಡಿದ ನಂತರ ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಈ ಪ್ರಕರಣದಲ್ಲಿ ಅವರು ಬೇರೆ ಯಾರ ಮಾತು ಕೇಳಬೇಕಿಲ್ಲ. ಅವರ ಆತ್ಮಸಾಕ್ಷಿ ಮಾತನ್ನು ಕೇಳಲಿ. ಆ ರೀತಿ ಮಾತನಾಡಬಾರದಿತ್ತು ಎಂದು ಅವರ ಪಕ್ಷದ ನೂರು ನಾಯಕರು ನನ್ನ ಬಳಿ ಹೇಳಿದ್ದಾರೆ. ಅಚಾತುರ್ಯವಾಗಿ ಆ ರೀತಿ ಮಾತಾಡಿದ್ದೇನೆ ಕ್ಷಮೆ ಕೇಳುತ್ತೇನೆ ಎಂದಿದ್ದರೆ ಪ್ರಕರಣ ಮುಗಿಯುತ್ತಿತ್ತು. ಅದನ್ನು ಬಿಟ್ಟು ಸುಳ್ಳಿಗೆ ಸುಳ್ಳು ಸೇರಿಸಿಕೊಂಡು ಹೋದರೆ ಪ್ರಯೋಜನವಿಲ್ಲ. ಅವರ ಆರೋಪ ಸುಳ್ಳು. ಅವರದ್ದೇ ಅನೇಕ ತನಿಖಾ ತಂಡಗಳಿವೆಯಲ್ಲ ತನಿಖೆ ಮಾಡಿಸಲಿ” ಎಂದು ಕಿಡಿಕಾರಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…