ಶೃಂಗೇರಿ: ಸಿ.ಟಿ.ರವಿ ಒಬ್ಬ ದೊಡ್ಡ ಡ್ರಾಮಾ ಮಾಸ್ಟರ್. ಸುಳ್ಳಿಗೆ ಸುಳ್ಳು ಪೋಣಿಸಿ ಕಥೆ ಹೆಣೆಯುವುದರಲ್ಲಿ ನಿಸ್ಸೀಮ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಟೀಕಿಸಿದ್ದಾರೆ.
ಸಿ.ಟಿ.ರವಿ ಅವರಿಗೆ ಬೆದರಿಕೆ ಪತ್ರ ಸಂಬಂಧ ಮಾಧ್ಯಮದವರ ಪ್ರಶ್ನಗೆ ಪ್ರತಿಕ್ರಿಯಿಸಿದ ಅವರು, “ಸಿ.ಟಿ.ರವಿ ದೊಡ್ಡ ಡ್ರಾಮಾ ಮಾಸ್ಟರ್ ಆಗಿದ್ದಾರೆ. ಅವರನ್ನು ರಾಷ್ಟ್ರೀಯ ನಾಯಕರು, ಬಿಜೆಪಿ ರಾಷ್ಟ್ರೀಯ ಪದಾಧಿಕಾರಿ ಎಂದು ಭಾವಿಸಿದ್ದೆ. ಅವರ ಮಾತು, ವಿಚಾರ ನೋಡಿದ ನಂತರ ಇಷ್ಟು ಕೀಳು ಮಟ್ಟಕ್ಕೆ ಇಳಿಯುತ್ತಾರೆ ಎಂದು ನಿರೀಕ್ಷೆ ಮಾಡಿರಲಿಲ್ಲ. ಈ ಪ್ರಕರಣದಲ್ಲಿ ಅವರು ಬೇರೆ ಯಾರ ಮಾತು ಕೇಳಬೇಕಿಲ್ಲ. ಅವರ ಆತ್ಮಸಾಕ್ಷಿ ಮಾತನ್ನು ಕೇಳಲಿ. ಆ ರೀತಿ ಮಾತನಾಡಬಾರದಿತ್ತು ಎಂದು ಅವರ ಪಕ್ಷದ ನೂರು ನಾಯಕರು ನನ್ನ ಬಳಿ ಹೇಳಿದ್ದಾರೆ. ಅಚಾತುರ್ಯವಾಗಿ ಆ ರೀತಿ ಮಾತಾಡಿದ್ದೇನೆ ಕ್ಷಮೆ ಕೇಳುತ್ತೇನೆ ಎಂದಿದ್ದರೆ ಪ್ರಕರಣ ಮುಗಿಯುತ್ತಿತ್ತು. ಅದನ್ನು ಬಿಟ್ಟು ಸುಳ್ಳಿಗೆ ಸುಳ್ಳು ಸೇರಿಸಿಕೊಂಡು ಹೋದರೆ ಪ್ರಯೋಜನವಿಲ್ಲ. ಅವರ ಆರೋಪ ಸುಳ್ಳು. ಅವರದ್ದೇ ಅನೇಕ ತನಿಖಾ ತಂಡಗಳಿವೆಯಲ್ಲ ತನಿಖೆ ಮಾಡಿಸಲಿ” ಎಂದು ಕಿಡಿಕಾರಿದರು.
ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…
ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…
ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…
ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ; ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…
ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…
246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…