ಬೆಂಗಳೂರು : ಸಿದ್ದರಾಮಯ್ಯನವರೇ ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು ಎಂದು ಅತೃಪ್ತ ಶಾಸಕರ ಹೇಳಿಕೆಗಳು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ಸಿದ್ದರಾಮಯ್ಯನವರು ನಮ್ಮ ನಾಯಕರು, ಅವರಿಂದಾಗಿಯೇ ನಾವು ರಾಜೀನಾಮೆ ಕೊಟ್ಟಿರುವುದು’ ಎಂದು ಕೆಲವು ಅತೃಪ್ತ ಶಾಸಕರು ನೀಡಿದ್ದಾರೆನ್ನಲಾದ ಹೇಳಿಕೆಗಳು ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ. ಇದು ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತ. ಈ ಮಾತನ್ನು ಅವರು ನನ್ನ ಮುಂದೆ ಬಂದು ಹೇಳಲಿ ಅದಕ್ಕೆ ತಕ್ಕ ಉತ್ತರ ಕೊಡುತ್ತೇನೆ ಎಂದಿದ್ದಾರೆ.
ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಕೂಡಾ ನನ್ನ ಮೇಲೆ ಸುಳ್ಳು ಆರೋಪಗಳ ಸುರಿ ಮಳೆ ಆಗಿವೆ. ನನ್ನ ರಾಜಕೀಯ ಜೀವನದಲ್ಲಿ ಇವೆಲ್ಲ ಮೊದಲನೆಯದಲ್ಲ. ಬಹುಶ: ಕೊನೆಯದೂ ಅಲ್ಲ. ಇಂತಹ ಸುಳ್ಳು ಆರೋಪಗಳ ವಿಷ ಕುಡಿದು, ಕುಡಿದು ನಾನು ವಿಷಕಂಠನಾಗಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿದರು.
ಸಿದ್ದರಾಮಯ್ಯನವರು ನಮ್ಮ ನಾಯಕರು ಎಂದು ಅತೃಪ್ತ ಶಾಸಕರು ಹೇಳಿಕೆ ನೀಡಿದ್ದರೆ ಅವರಿಗೆ ತಮ್ಮ ತಪ್ಪುಗಳನ್ನು ಮುಚ್ಚಿಕೊಳ್ಳುವ ದುರುದ್ದೇಶ ಇರಬಹುದು. ಅವರು ನೀಡದೆ ಇದ್ದ ಹೇಳಿಕೆಯನ್ನು ಮಾಧ್ಯಮಗಳು ವರದಿ ಮಾಡುತ್ತಿದ್ದರೆ ಇದರ ಹಿಂದೆ ಯಾರೋ ಸಂಚುಕೋರರು ಇದ್ದಾರೆಂದು ಅರ್ಥ. ಸತ್ಯ ಬಯಲಾಗುವ ಕಾಲ ಬಂದೇ ಬರುತ್ತದೆ. ಕೊನೆಗೆ ಸತ್ಯವೇ ಗೆಲ್ಲುವುದು. ಸತ್ಯಮೇವ ಜಯತೇ ಎಂದು ಹೇಳಿದ್ದಾರೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…