ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘಪರಿವಾರದ ಗೂಂಡಾಗಳ ಅನೈತಿಕ ಪೊಲೀಸ್’ಗಿರಿ ಮಿತಿ ಮೀರುತ್ತಿದ್ದು ಉತ್ತರ ಪ್ರದೇಶದ ಗೂಂಡಾ ಸಂಸ್ಕೃತಿಯನ್ನು ಮಂಗಳೂರಿನಲ್ಲಿ ವ್ಯವಸ್ಥಿತವಾಗಿ ಕಾರ್ಯರೂಪಕ್ಕೆ ತರಲು ದುಷ್ಟಶಕ್ತಿಗಳು ಶ್ರಮಿಸುತ್ತಿವೆ. ಪೊಲೀಸ್ ಇಲಾಖೆ ಕೂಡಲೇ ಇದಕ್ಕೆ ಕಡಿವಾಣ ಹಾಕದಿದ್ದರೆ ಪರಿಸ್ಥಿತಿ ಕೈಮೀರಿ ಹೋಗುವ ಸಾಧ್ಯತೆಗಳಿವೆ. ಪೊಲೀಸ್ ಇಲಾಖೆ ನಿರ್ವಹಿಸಬೇಕಾದ ಕಾನೂನು ಸುವ್ಯವಸ್ಥೆಯನ್ನು ಸಂಘಪರಿವಾರದ ಗೂಂಡಾಗಳಿಗೆ ಹೊರಗುತ್ತಿಗೆ ನೀಡಲಾಗಿದೆಯೇ ಎಂದು SDPI ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನ್ವರ್ ಸಾದತ್ ಬಜತ್ತೂರು ಪ್ರಶ್ನಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಬಿಡುಗಡೆಗೊಳಿಸಿದ ಅವರು, ಇತ್ತೀಚೆಗೆ ಮಂಗಳೂರಿನ ಚಿನ್ನದ ಅಂಗಡಿಯೊಂದಕ್ಕೆ ನುಗ್ಗಿದ ದುಷ್ಕರ್ಮಿಗಳು ಅಲ್ಲಿ ಕೆಲಸ ಮಾಡುತ್ತಿದ್ದ ಮುಸ್ಲಿಂ ಸಮುದಾಯದ ಯುವಕನಿಗೆ ಥಳಿಸಿದ್ದಾರೆ. ಆ ನಂತರ ಮಂಗಳೂರಿನಲ್ಲಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ ಗೂಂಡಾಗಳು ನಿನ್ನೆ ಬಂಟ್ವಾಳ ತಾಲೂಕಿನ ರಾಯಿಯಲ್ಲಿ ಸುಳ್ಳು ಆರೋಪ ಹೊರಿಸಿ ಅಮಾಯಕ ವ್ಯಕ್ತಿಯೊಬ್ಬನನ್ನು ಮರಕ್ಕೆ ಕಟ್ಟಿಹಾಕಿ ಭೀಕರವಾಗಿ ಹಲ್ಲೆ ನಡೆಸುವ ಮೂಲಕ ಉತ್ತರ ಪ್ರದೇಶದ ಗೂಂಡಾ ಸಂಸ್ಕೃತಿಯನ್ನು ರಾಜಾರೋಷವಾಗಿ ಮಾಡಿದ್ದಾರೆ. ಗಂಭೀರ ಸ್ವರೂಪದ ಗಾಯಗೊಂಡ ಸಂತ್ರಸ್ತರಿಗೆ ಸೂಕ್ತ ರೀತಿಯ ಚಿಕಿತ್ಸೆ ನೀಡದೆ ಪೊಲೀಸರು ಬಿಟ್ಟು ಕಳಿಸಿದ್ದಾರೆ.ಇದರ ವಿರುದ್ಧ ಅವರ ಸಂಬಂಧಿಕರು ಸುಮೋಟೋ ಕೇಸು ದಾಖಲಿಸುವಂತೆ ಪೊಲೀಸರಲ್ಲಿ ಕೇಳಿಕೊಂಡಾಗ ನಮಗೆ ಈ ಬಗ್ಗೆ ಕ್ರಮ ಕೈಗೊಳ್ಳಲು ಮುಕ್ತ ಸ್ವಾತಂತ್ರ್ಯ ಇಲ್ಲ ಎಂದು ಹೇಳಿರುವುದು ಪೊಲೀಸರ ಅಸಹಾಯಕತೆ ಮತ್ತು ಒತ್ತಡವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು ಟೀಕಿಸಿದ್ದಾರೆ.
ಈ ಘಟನೆ ಒಂದು ಗಂಭೀರ ಸ್ವರೂಪದ ವಿಚಾರವಾಗಿದೆ. ಆದ್ದರಿಂದ ಜಿಲ್ಲಾಡಳಿತ, ಮಂಗಳೂರು ನಗರ ಪೋಲಿಸ್ ಕಮಿಷನರ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಕೂಡಲೇ ಮಧ್ಯಪ್ರವೇಶಿಸಿ ಬಸ್ಸು ನಿರ್ವಾಹಕ ಸೇರಿದಂತೆ ಘಟನೆಗೆ ಸಂಬಂಧಪಟ್ಟ ಎಲ್ಲಾ ಆರೋಪಿಗಳನ್ನು ಯಾವುದೇ ಒತ್ತಡಗಳಿಗೆ ಮಣಿಯದೆ ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಅನ್ವರ್ ಸಾದತ್ ಬಜತ್ತೂರು ಒತ್ತಾಯಿಸಿದ್ದಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…