ದಿಬ್ರುಗ: ಮುಂಬರುವ ವಿಧಾನಸಭಾ ಚುನಾವಣೆಯ ಕುರಿತಾದಂತೆ ಅಸ್ಸಾಂ ರಾಜ್ಯದಾದ್ಯಂತ ಪ್ರಚಾರ ಕಾರ್ಯದಲ್ಲಿ ತೊಡಗಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದು, ಪಕ್ಷವು ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಸಿಎಎಯನ್ನು ಹಿಂದೆಗೆಯಲಾಗುವುದು ಎಂದು ಅವರು ಹೇಳಿಕೆ ನೀಡಿದ್ದಾರೆ.
ಅಸ್ಸಾಂನ ದಿಬ್ರುಗದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಹುಲ್ ಗಾಂಧಿ “ಬಿಜೆಪಿಯು ಅಸ್ಸಾಂನ ಚಹಾ ಕಾರ್ಮಿಕರಿಗೆ 351ರೂ. ನೀಡುವುದಾಗಿ ಭರವಸೆ ನೀಡಿತ್ತು. ಆದರೆ 167ರೂ.ಯನ್ನು ನೀಡಲಾಗುತ್ತಿದೆ. ನಾನು ನರೇಂದ್ರ ಮೋದಿಯಲ್ಲ. ನಾನು ಸುಳ್ಳು ಹೇಳುವುದಿಲ್ಲ. ನಾವು ಇಂದು ನಿಮಗೆ ೫ ಭರವಸೆಗಳನ್ನು ನೀಡುತ್ತಿದ್ದೇವೆ”
“ಅಸ್ಸಾಂನ ಚಹಾ ಕಾರ್ಮಿಕರಿಗೆ 365ರೂ., ಸಿಎಎ ಕಾಯ್ದೆಯನ್ನು ರದ್ದುಪಡಿಸುತ್ತೇವೆ. 5 ಲಕ್ಷದಷ್ಟು ಉದ್ಯೋಗಗಳ ನಿರ್ಮಾಣ, 200 ಯುನಿಟ್ ಗಳಷ್ಟು ಉಚಿತ ವಿದ್ಯುತ್ ಮತ್ತು ಗೃಹಿಣಿಯರಿಗೆ 2,000ರೂ. ನೀಡಲಾಗುವುದು” ಎಂದು ಸಮಾವೇಶದಲ್ಲಿ ಹೇಳಿಕೆ ನೀಡಿದ್ದಾರೆ.
ಪ್ರಜಾಪ್ರಭುತ್ವ ನಾಶವಾಗುತ್ತಿದೆ. ಯುವಜನತೆಗೆ ಉದ್ಯೋಗ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ. ಯುವಕರು ರಾಜಕಾರಣಕ್ಕೆ ಧುಮುಕಬೇಕು. ಉತ್ತಮ ಅಸ್ಸಾಂಗಾಗಿ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.
ಟೀ ವರ್ಕ್ರ್ ಗಳ ಕಲ್ಯಾಣಕ್ಕೆ ಕಾಂಗ್ರೆಸ್ ಹೊಸ ಯೋಜನೆಗಳನ್ನು ರೂಪಿಸಲಿದೆ. ನಮ್ಮ ಸರ್ಕಾರ ಅಸ್ತಿತ್ವದಲ್ಲಿ ಇದ್ದಾಗ ಬಂಡವಾಳ ಹರಿದು ಬಂದಿತ್ತು. ಈಗ ಎಲ್ಲವೂ ನಿಂತ ನೀರಾಗಿದೆ ಎಂದು ಬಿಜೆಪಿಯನ್ನು ಟೀಕಿಸಿದರು.
ಇದನ್ನೂ ಓದಿ : ‘ಗ್ರಾಮ ಉಜಾಲಾ ಯೋಜನೆ’ : 10 ರೂ.ಗೆ ಎಲ್.ಇ.ಡಿ. ಬಲ್ಬ್ ಯೋಜನೆಗೆ ಚಾಲನೆ -Vishwanews24
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…