Featured

ಸುವರ್ಣ ತ್ರಿಭುಜ ಬೋಟ್ ದುರಂತ ಪ್ರಕರಣ : 40 ಲಕ್ಷ ವಿಮಾ ಪರಿಹಾರ ಮಂಜೂರು -Vishwanews24

ಸುವರ್ಣ ತ್ರಿಭುಜ ಬೋಟ್ ದುರಂತ ಪ್ರಕರಣ : 40 ಲಕ್ಷ ವಿಮಾ ಪರಿಹಾರ ಮಂಜೂರು -Vishwanews24

ಮಹಾಲಕ್ಷ್ಮೀ  ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ನ್ಯಾಷನಲ್ ಇನ್ಶುರೆನ್ಸ್  ಪ್ರಬಂಧಕರಿಗೆ ಅಭಿನಂದನೆ

ಸುವರ್ಣ ತ್ರಿಭುಜ ಬೋಟ್ ದುರಂತ ಪ್ರಕರಣದಲ್ಲಿ ರೂ. 4೦,೦೦,೦೦೦ ವಿಮಾ ಪರಿಹಾರ ಮೊತ್ತವನ್ನು ಮಂಜೂರು ಮಾಡುವಲ್ಲಿ ವಿಶೇಷ ಮುತುವರ್ಜಿ ವಹಿಸಿದ ನ್ಯಾಷನಲ್ ಇನ್ಶುರೆನ್ಸ್  ಹಿರಿಯ ವಿಭಾಗೀಯ ಪ್ರಬಂಧಕರಾದ ಶ್ರೀಮತಿ ಪ್ರತಿಭಾ ಶೆಟ್ಟಿಯವರನ್ನು ಮಹಾಲಕ್ಷ್ಮೀ  ಕೋ ಆಪರೇಟಿವ್ ಬ್ಯಾಂಕ್ ವತಿಯಿಂದ ಆಧ್ಯಕ್ಷರಾದ ಶ್ರೀ ಯಶ್‌ಪಾಲ್ ಸುವರ್ಣ ಸನ್ಮಾನಿಸಿ ಅಭಿನಂದಿಸಲಾಯಿತು.

ಅಭಿನ0ದನೆ ಸ್ವೀಕರಿಸಿದ ಪ್ರತಿಭಾ ಶೆಟ್ಟಿಯವರು ವಿಮಾ ಪರಿಹಾರ ಮಂಜೂರಾತಿ ಪ್ರಕ್ರಿಯೆಯಲ್ಲಿ ಮಹಾಲಕ್ಷ್ಮೀ  ಬ್ಯಾಂಕ್ ಹಾಗೂ ಮೀನುಗಾರರ ಸಂಘದ ಪೂರಕ ಸಹಕಾರದಿಂದ ಈ ಗರಿಷ್ಠ ಮೊತ್ತ ಪರಿಹಾರ ನೀಡಲು ಸಾಧ್ಯವಾಯಿತು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯಶ್‌ಪಾಲ್ ಸುವರ್ಣ, ಸುವರ್ಣ ತ್ರಿಭುಜ ಬೋಟ್ ವಿಮಾ ಪರಿಹಾರ ಮಂಜೂರಾತಿಯಿ0ದ ಬ್ಯಾಂಕ್ ಒದಗಿಸಿದ್ದ ಬೋಟಿನ ಸಾಲ ಮರುಪಾವತಿಗೆ ಅನುಕೂಲವಾಯಿತು. ವಿಮಾ ಪರಿಹಾರ ಮಂಜೂರಾತಿಗೆ ಎದುರಾದ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಸಹಕರಿಸಿದ ಕೇಂದ್ರ ಸಚಿವರಾದ ಶ್ರೀಮತಿ ನಿರ್ಮಲ ಸೀತರಾವiನ್, ಶ್ರೀ ರಾಜನಾಥ ಸಿಂಗ್, ಸಂಸದರಾದ ಶೋಭಾ ಕರಂದ್ಲಾಜೆ, ಶಾಸಕರಾದ ಶ್ರೀ ಕೆ. ರಘುಪತಿ ಭಟ್, ಮಲ್ಪೆ ಮೀನುಗಾರರ ಸಂಘ ಹಾಗೂ ನ್ಯಾಷನಲ್ ಇನ್ಶೂö್ಯರೆನ್ಸ್ ಕಂಪೆನಿಯ ಸಿಬ್ಬಂದಿಗಳಿಗೆ ಬ್ಯಾಂಕಿನ ವತಿಯಿಂದ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಸಮಾರಂಭದಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣ ಸುವರ್ಣ, ಪ್ರಧಾನ ಕಾರ್ಯದರ್ಶಿ ಶ್ರೀ ಸುಭಾಸ್ ಮೆಂಡನ್, ಯಾಂತ್ರಿಕ ಟ್ರಾಲ್ ಬೋಟ್ ಸಹಕಾರಿ ಸಂಘದ ಅಧ್ಯಕ್ಷರದ ಶ್ರೀ ರಾಮಚಂದ್ರ ಕುಂದರ್, ಆಳಸಮುದ್ರ ಮೀನುಗಾರರ ಸಂಘದ ಅಧ್ಯಕ್ಷ ಶ್ರೀ ಕಿಶೋರ್ ಸುವರ್ಣ, ಆಳ ಸಮುದ್ರ ಬೋಟ್ ತಂಡೇಲರ ಸಂಘದ ಅಧ್ಯಕ್ಷ ಶ್ರೀ ರವಿರಾಜ್ ಸುವರ್ಣ, ನ್ಯಾಷನಲ್ ಇನ್ಶುರೆನ್ಸ್ ಕಂಪೆನಿಯ ಅಧಿಕಾರಿ ಶ್ರೀ ನರಸಿಂಹ ಪೈ, ವಿಮಾ ಪ್ರತಿನಿಧಿಗಳಾದ ಶ್ರೀ ವಸಂತ್ ಎನ್. ಕೋಟ್ಯಾನ್, ಶ್ರೀ ವಿಜಯ ಪ್ರಕಾಶ್ ಹಾಗೂ ಬ್ಯಾಂಕಿನ ಆಡಳಿತ ಮಂಡಳಿಯ ನಿರ್ದೇಶಕರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago