ಉಡುಪಿ: ಸುವರ್ಣ ತ್ರಿಭುಜ ಬೋಟ್ನಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ಹೋಗಿ ಮೃತರಾದ ೭ ಮೀನುಗಾರರು ಕುಟುಂಬಕ್ಕೆ ಕೇಂದ್ರ ಸರಕಾರದಿಂದ ನಯಾ ಪೈಸೆ ಬಿಡುಗಡೆ ಬಗ್ಗೆ ಚಕಾರವೆತ್ತದ ಕರಾವಳಿಯ ಸಂಸದರ ನಡೆಯ ಬಗ್ಗೆ ಕಾಂಗ್ರೆಸ್ ಮುಖಂಡ, ಉಡುಪಿ ನಗರ ಸಭಾ ವಿರೋಧ ಪಕ್ಷದ ನಾಯಕ ರಮೇಶ್ ಕಾಂಚನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬೋಟ್ ದುರಂತ ನಡೆದು ಎರಡು ವರ್ಷವಾದರೂ, ಇನ್ನೂ ಈ ಘಟನೆಯ ತನಿಖೆ ಬಗ್ಗೆಯಾಗಲೀ, ಮೀನುಗಾರರಿಗೆ ಮತ್ತು ಅವರ ಕುಟುಂಬಕ್ಕೆ ಯಾವುದೇ ಸ್ಪಷ್ಟ ಚಿತ್ರಣವನ್ನು ಕೇಂದ್ರ ಸರಕಾರ ನೀಡಿಲ್ಲ.
ಈ ದುರ್ಘಟನೆಗೆ ನೌಕಾಪಡೆಯ ಬೃಹತ್ ನೌಕೆಯೇ ಕಾರಣವೆಂದು ಮೀನುಗಾರರು ಆರೋಪ ಮಾಡುತ್ತಿದ್ದು, ಇದರ ಬಗ್ಗೆಯೂ ಕರಾವಳಿಯ ಸಂಸದರಾದ ನಳಿನ್ ಕುಮಾರ್ ಕಟೀಲ್, ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ ಕೂಡ ಚಕಾರವೆತ್ತುತ್ತಿಲ್ಲ. ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಪರಿಹಾರಕ್ಕೂ ಪ್ರಯತ್ನಿಸದಿರುವುದು ಖಂಡನೀಯವೆಂದು ರಮೇಶ್ ಕಾಂಚಾನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸುವರ್ಣ ತ್ರಿಭುಜ ಬೋಟ್ ಅವಘಡದಲ್ಲಿ ನೌಕಾಪಡೆಯನ್ನು ರಕ್ಷಿಸಲು ಸತ್ಯಾಂಶ ಮರೆಮಾಚಲಾಗಿತ್ತು, ಅಧಿಕಾರಿಗಳು ನಿಜ ಹೇಳಲು ಮುಂದೆ ಬಂದು ಕೊನೆ ಕ್ಷಣದಲ್ಲಿ ಒಪ್ಪಿಕೊಂಡಿಲ್ಲದಿರಲು ಏನು ಕಾರಣವೆಂದು ಬಹಿರಂಗ ಪಡಿಸಲಿ. ಬೋಟ್ ಅವಘಡದಲ್ಲಿ ಕೇಂದ್ರ ಸರಕಾರ ಯಾವುದೇ ಪರಿಹಾರ ನೀಡದೆ ಮೀನುಗಾರ ಕುಟುಂಬಕ್ಕೆ ಅನ್ಯಾಯ ಎಸಗಿದೆಂದು ಕಾಂಚನ್ ದೂರಿದ್ದಾರೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್ಲೈನ್ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…