ಉಡುಪಿ: ಸುವರ್ಣ ತ್ರಿಭುಜ ಬೋಟ್ನಲ್ಲಿ ಆಳ ಸಮುದ್ರ ಮೀನುಗಾರಿಕೆಗೆ ಹೋಗಿ ಮೃತರಾದ ೭ ಮೀನುಗಾರರು ಕುಟುಂಬಕ್ಕೆ ಕೇಂದ್ರ ಸರಕಾರದಿಂದ ನಯಾ ಪೈಸೆ ಬಿಡುಗಡೆ ಬಗ್ಗೆ ಚಕಾರವೆತ್ತದ ಕರಾವಳಿಯ ಸಂಸದರ ನಡೆಯ ಬಗ್ಗೆ ಕಾಂಗ್ರೆಸ್ ಮುಖಂಡ, ಉಡುಪಿ ನಗರ ಸಭಾ ವಿರೋಧ ಪಕ್ಷದ ನಾಯಕ ರಮೇಶ್ ಕಾಂಚನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬೋಟ್ ದುರಂತ ನಡೆದು ಎರಡು ವರ್ಷವಾದರೂ, ಇನ್ನೂ ಈ ಘಟನೆಯ ತನಿಖೆ ಬಗ್ಗೆಯಾಗಲೀ, ಮೀನುಗಾರರಿಗೆ ಮತ್ತು ಅವರ ಕುಟುಂಬಕ್ಕೆ ಯಾವುದೇ ಸ್ಪಷ್ಟ ಚಿತ್ರಣವನ್ನು ಕೇಂದ್ರ ಸರಕಾರ ನೀಡಿಲ್ಲ.
ಈ ದುರ್ಘಟನೆಗೆ ನೌಕಾಪಡೆಯ ಬೃಹತ್ ನೌಕೆಯೇ ಕಾರಣವೆಂದು ಮೀನುಗಾರರು ಆರೋಪ ಮಾಡುತ್ತಿದ್ದು, ಇದರ ಬಗ್ಗೆಯೂ ಕರಾವಳಿಯ ಸಂಸದರಾದ ನಳಿನ್ ಕುಮಾರ್ ಕಟೀಲ್, ಉಡುಪಿ ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಉತ್ತರ ಕನ್ನಡ ಸಂಸದ ಅನಂತ ಕುಮಾರ್ ಹೆಗಡೆ ಕೂಡ ಚಕಾರವೆತ್ತುತ್ತಿಲ್ಲ. ಸಂತ್ರಸ್ತ ಕುಟುಂಬಕ್ಕೆ ಗರಿಷ್ಠ ಪ್ರಮಾಣದ ಪರಿಹಾರಕ್ಕೂ ಪ್ರಯತ್ನಿಸದಿರುವುದು ಖಂಡನೀಯವೆಂದು ರಮೇಶ್ ಕಾಂಚಾನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಸುವರ್ಣ ತ್ರಿಭುಜ ಬೋಟ್ ಅವಘಡದಲ್ಲಿ ನೌಕಾಪಡೆಯನ್ನು ರಕ್ಷಿಸಲು ಸತ್ಯಾಂಶ ಮರೆಮಾಚಲಾಗಿತ್ತು, ಅಧಿಕಾರಿಗಳು ನಿಜ ಹೇಳಲು ಮುಂದೆ ಬಂದು ಕೊನೆ ಕ್ಷಣದಲ್ಲಿ ಒಪ್ಪಿಕೊಂಡಿಲ್ಲದಿರಲು ಏನು ಕಾರಣವೆಂದು ಬಹಿರಂಗ ಪಡಿಸಲಿ. ಬೋಟ್ ಅವಘಡದಲ್ಲಿ ಕೇಂದ್ರ ಸರಕಾರ ಯಾವುದೇ ಪರಿಹಾರ ನೀಡದೆ ಮೀನುಗಾರ ಕುಟುಂಬಕ್ಕೆ ಅನ್ಯಾಯ ಎಸಗಿದೆಂದು ಕಾಂಚನ್ ದೂರಿದ್ದಾರೆ.
ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…
ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…
ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…
ಸತತ 4ನೇ ಬಾರಿ CNG ದರ ಏರಿಕೆ: ಪ್ರತಿ ಕೆಜಿಗೆ 2 ರೂ. ಹೆಚ್ಚಳ ನವದೆಹಲಿ: ಪೆಟ್ರೋಲ್, ಡೀಸೆಲ್ ಬಳಿಕ…
ದುಬೈನಲ್ಲಿ ರಸ್ತೆ ಅಪಘಾತ : ಕಿನ್ನಿಗೋಳಿಯ ಯುವತಿ ಸಾವು ಮಂಗಳೂರು: ದುಬೈನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು, ಕಳೆದ ಕೆಲವು…
ಬಿಜೆಪಿ ಸಂಘಪರಿವಾರವು ದೇಶದ ಕಾನೂನಿಗೆ ವಿರುದ್ಧವಾಗಿದೆ: ರಿಯಾಝ್ ಫರಂಗಿಪೇಟೆ ಗಲಭೆಕೋರರ ವಿರುದ್ಧದ ಪ್ರಕರಣ ಹಿಂಪಡೆದ ಕ್ರಮಕ್ಕೆ SDPI ತೀವ್ರ ವಿರೋಧ…