ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರ ಹತ್ಯೆ ಪ್ರಕರಣ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಮೂಡಿಸಿದ್ದು, ಇದೀಗ ಸಿಬಿಐ ತನಿಖೆಗೆ ವಹಿಸಲಾಗಿದೆ.
ಮೇ 6ರಂದು ರಾತ್ರಿ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಅವರ ಆಪ್ತ ಸಹಾಯಕ ಚಂದ್ರನಾಥ್ ರಥ್ ಅವರನ್ನು ಗುಂಡಿಕ್ಕಿ ಕೊಲ್ಲಲಾಗಿತ್ತು. ಆರೋಪಿಗಳ ಪತ್ತೆಗಾಗಿ ಎಸ್ಐಟಿ ರಚಿಸಲಾಗಿತ್ತು. ಇದೀಗ ಈ ಪ್ರಕರಣದ ತನಿಖೆಯನ್ನು ಪಶ್ಚಿಮ ಬಂಗಾಳ ಪೊಲೀಸರಿಂದ ಸಿಬಿಐಗೆ ಹಸ್ತಾಂತರಿಸಲಾಗಿದೆ.
ಇದನ್ನೂ ಓದಿ:
ಪ್ರಕರಣ ಸಂಬಂಧ ಮೇ 11ರಂದು ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ತನಿಖಾಧಿಕಾರಿಗಳು ಡಿಜಿಟಲ್ ಸುಳಿವು ಮತ್ತು ಅಂತರರಾಜ್ಯ ಸಂಪರ್ಕ ಆಧಾರದ ಮೇಲೆ ಪ್ರಕರಣವನ್ನು ಭೇದಿಸಿದ್ದಾರೆ.
ಕಾರಿನಲ್ಲಿ ಪರಾರಿಯಾಗಲು ಯತ್ನಿಸುತ್ತಿದ್ದ ಆರೋಪಿಗಳು ಟೋಲ್ ಪ್ಲಾಜಾವೊಂದರಲ್ಲಿ ಯುಪಿಐ ಮೂಲಕ ಹಣ ಪಾವತಿಸಿದ್ದರು. ಈ ಡಿಜಿಟಲ್ ಪೇಮೆಂಟ್ ತನಿಖಾಧಿಕಾರಿಗಳಿಗೆ ಮೊಬೈಲ್ ನಂಬರ್ ಮತ್ತು ಶಂಕಿತರ ಗುರುತನ್ನು ಪತ್ತೆಹಚ್ಚಲು ನೆರವಾಯಿತು. ಸಿಸಿಟಿವಿ ದೃಶ್ಯಾವಳಿಗಳು ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಆಧರಿಸಿ ಎಸ್ಐಟಿ ಅಧಿಕಾರಿಗಳು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ತೆರಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಸದ್ಯ ಆರೋಪಿಗಳನ್ನು 13 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಇದನ್ನೂ ಓದಿ:
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…