ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರು ಸೋಮವಾರ (ಇಂದು) ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡಿದ್ದು, 35 ಮಂದಿ ಬಿಜೆಪಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಸುವೇಂಧು ಅಧಿಕಾರಿ ಅವರು ಮೇ 9 ರಂದು ಬಂಗಾಳ ಸಿಎಂ ಆಗಿ ಪ್ರಮಾಣ ಸ್ವೀಕರಿಸಿದ ಮೂರು ವಾರಗಳ ನಂತರ ಸಂಪುಟ ವಿಸ್ತರಣೆಯಾಗಿದೆ. ಕೋಲ್ಕತ್ತಾದ ಲೋಕಭವನದಲ್ಲಿ ಪ್ರಮಾಣ ಸ್ವೀಕಾರ ಸಮಾರಂಭ ನಡೆದಿದ್ದು, ರಾಜ್ಯಪಾಲ ಆರ್.ಎನ್ ರವಿ ಅವರು ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ. ಭಾರತದ ಸಂವಿಧಾನದ ವಿಧಿ 164(1ಎ) ಪ್ರಕಾರ ಪಶ್ಚಿಮ ಬಂಗಾಳವು ಮುಖ್ಯಮಂತ್ರಿ ಸೇರಿದಂತೆ ಗರಿಷ್ಠ 44 ಸಚಿವರನ್ನ ಹೊಂದಬಹುದಾಗಿದೆ.
ಮೊದಲ ಹಂತದಲ್ಲಿ ಸುವೇಂದು ಅಧಿಕಾರಿ ಅವರೊಟ್ಟಿಗೆ ಬಿಜೆಪಿ ಶಾಸಕರಾದ ದಿಲೀಪ್ ಘೋಷ್, ಅಗ್ನಿಮಿತ್ರ ಪಾಲ್, ನಿಸಿತ್ ಪ್ರಾಮಾಣಿಕ್, ಅಶೋಕ್ ಕೀರ್ತಾನಿಯಾ ಮತ್ತು ಕ್ಷುದಿರಾಮ್ ತುಡು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು. ಇಂದು 2ನೇ ಹಂತದಲ್ಲಿ 35 ಶಾಸಕರು ಪ್ರಮಾಣ ಸ್ವೀಕರಿಸಿದ್ದಾರೆ.
35 ಶಾಸಕರಲ್ಲಿ ಅರ್ಜುನ್ ಸಿಂಗ್, ತಪಸ್ ರಾಯ್, ಸಾರದ್ವತ್ ಮುಖರ್ಜಿ, ಜಗನ್ನಾಥ್ ಚಟ್ಟೋಪಾಧ್ಯಾಯ ಮತ್ತು ಶಂಕರ್ ಘೋಷ್ ಸೇರಿದ್ದಾರೆ. ಜೊತೆಗೆ ಸ್ವಪನ್ ದಾಸ್ಗುಪ್ತಾ, ದೂಧ್ ಕುಮಾರ್ ಮೊಂಡಲ್, ದೀಪಕ್ ಬರ್ಮನ್, ಮನೋಜ್ ಒರಾನ್ ಮತ್ತು ಗೌರಿ ಶಂಕರ್ ಘೋಷ್ ಕೂಡ ನೂತನ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ.
ಬಿಜೆಪಿ ಶಾಸಕರಾದ ರಾಜೇಶ್ ಮಹಾತ, ಇಂದ್ರಾನಿಲ್ ಖಾನ್ ಮತ್ತು ಮಾಲತಿ ರಾವ ರಾಯ್ ಅವರು ಸುವೇಂಧು ಸರ್ಕಾರದಲ್ಲಿ ರಾಜ್ಯ ಸಚಿವರಾಗಿ (ಸ್ವತಂತ್ರ ಉಸ್ತುವಾರಿ) ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಜೊತೆಗೆ ಸಂತಾನು ಪ್ರಮಾಣಿಕ್, ಪೂರ್ಣಿಮಾ ಚಕ್ರವರ್ತಿ, ಉಮೇಶ್ ರೈ, ಜೋಯೆಲ್ ಮುರ್ಮು, ಅಶೋಕ್ ದಿಂಡಾ, ಆನಂದಮೋಯ್ ಬರ್ಮನ್, ಕೌಶಿಕ್ ಚೌಧರಿ, ಗಾರ್ಗಿ ದಾಸ್ ಘೋಷ್, ಭಾಸ್ಕರ್ ಭಟ್ಟಾಚಾರ್ಯ, ದಿಬಾಕರ್ ಘರಾಮಿ ಮತ್ತು ಸುಮನಾ ಸರ್ಕಾರ್ ರಾಜ್ಯ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಈ ಮೂಲಕ ಒಟ್ಟು ಬಲ 41ಕ್ಕೆ ಏರಿಕೆಯಾಗಿದೆ.
ಉಡುಪಿ ಕೃಷ್ಣ ಮಠದಲ್ಲಿ ತಪ್ತಮುದ್ರಾಧಾರಣೆ ಉಡುಪಿ: ಆಷಾಢ ಶುಕ್ಲ ಪ್ರಥಮ ಏಕಾದಶಿ ಅಂಗವಾಗಿ ಉಡುಪಿ ಜಿಲ್ಲೆಯ ಪ್ರಮುಖ ಮಠಗಳಲ್ಲಿ ತಪ್ತ…
ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ದಾಳಿ ನಡೆಸಿದ ಘಟನೆ ನಗರದ ಲಾಲ್ ಬಾಗ್ ಸಿಗ್ನಲ್ ಬಳಿ…
ಹವಾಮಾನ ವೈಪರೀತ್ಯದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಪುನರಾರಂಭ ಅಮರನಾಥ :ಜಮ್ಮು ಮತ್ತು ಕಾಶ್ಮೀರದಲ್ಲಿ ಕಳೆದ ಆರು ದಿನಗಳಿಂದ ನಿರಂತರ ಮಳೆ,…
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನವದೆಹಲಿ: ನೀಟ್ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಆಕ್ರೋಶ ಭುಗಿಲೆದ್ದ…
ಕಾಮನ್ವೆಲ್ತ್ ಗೇಮ್ಸ್ 2026 : ಭಾರತದ ಪದಕದ ಖಾತೆ ತೆರೆದ ಝಂದು ಕುಮಾರ್: ಪ್ಯಾರಾ ಪವರ್ಲಿಫ್ಟಿಂಗ್ನಲ್ಲಿ ಕಂಚಿನ ಸಾಧನೆ ಗ್ಲಾಸ್ಕೊ…
ಅಯೋಧ್ಯೆ ಶ್ರೀರಾಮ ಮಂದಿರ ಧಾರ್ಮಿಕ ಸಮಿತಿಯಲ್ಲಿ ಪೇಜಾವರ ಶ್ರೀಗಳಿಗೆ ಸ್ಥಾನ ಅಯೋಧ್ಯೆ: ಶ್ರೀ ರಾಮಮಂದಿರದ ಪೂಜಾ ವಿಧಿವಿಧಾನಗಳು ಹಾಗೂ ಧಾರ್ಮಿಕ…