ಸುಶಾಂತ್‌ ಸಾವು ಪ್ರಕರಣ : ರಿಯಾ ಚಕ್ರವರ್ತಿ ಜಾಮೀನು ಅರ್ಜಿ ವಜಾ -Vishwanews24

Featured, ರಾಜ್ಯ ನ್ಯೂಸ್

ಸುಶಾಂತ್‌ ಸಾವು ಪ್ರಕರಣ : ರಿಯಾ ಚಕ್ರವರ್ತಿ ಜಾಮೀನು ಅರ್ಜಿ ವಜಾ -Vishwanews24

ಬೆಂಗಳೂರು: ನಟ ಸುಶಾಂತ್‌ ಸಿಂಗ್‌ ಪ್ರಕರಣಕ್ಕೆ ಸಂಬಂಧಿಸಿದಂತರ ಡ್ರಗ್ಸ್‌ ಆರೋಪದ ಮೇಲೆ ಎನ್‌ಸಿಬಿ ಬಂಧನಕ್ಕೆ ಒಳಗಾಗಿರುವ ಬಾಲಿವುಡ್‌ ನಟಿ ರಿಯಾ ಚಕ್ರವರ್ತಿ ಅವರ ಜಾಮೀನು ಅರ್ಜಿಯನ್ನು ಮುಂಬೈನ ವಿಶೇಷ ನ್ಯಾಯಾಲಯ ಶುಕ್ರವಾರ ವಜಾ ಮಾಡಿದೆ.

ರಿಯಾ ಚಕ್ರವರ್ತಿ ಅವರನ್ನು ನಟ ಸುಶಾಂತ್‌ ಸಿಂಗ್‌ ರಜಪೂತ್‌ ಸಾವಿನ ಪ್ರಕರಣ ಸಂಬಂಧ ಮಂಗಳವಾರ ಬಂಧಿಸಲಾಗಿತ್ತು. ಅಲ್ಲದೇ, ಸೆಪ್ಟೆಂಬರ್‌ 22ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ರಿಯಾ ಸಹೋದರ ಶೋಯಿಕ್‌‌‌‌‌‌ ಚಕ್ರವರ್ತಿ ಹಾಗೂ ಇತರ ನಾಲ್ವರು ಆರೋಪಿಗಳ ಜಾಮೀನು ಅರ್ಜಿಯ ವಿಚಾರಣೆ ಕೂಡಾ ಮುಂಬೈನ ವಿಶೇಷ ನ್ಯಾಯಾಲಯದಲ್ಲಿ ನಡೆದಿದ್ದು, ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿದೆ.

ಜುಲೈ 25ರಂದು ಸುಶಾಂತ್‌ ಸಿಂಗ್‌ ತಂದೆ ಕೆ.ಕೆ.ಸಿಂಗ್ ಅವರು, ಸುಶಾಂತ್‌ ಸಿಂಗ್‌ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದಾರೆ ಎಂದು ರಿಯಾ ಸೇರಿದಂತೆ ಅವರ ಕುಟುಂಬದ ವಿರುದ್ದ ಪಟ್ನಾ ಪೊಲೀಸ್‌‌ ಠಾಣೆಯಲ್ಲಿ ದೂರು ನೀಡಿದ್ದರು.