ಮುಂಬೈ: ಸುಪ್ರೀಂಕೋರ್ಟ್ ಸುಶಾಂತ್ ಸಿಂಗ್ ಪ್ರಕರಣದ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿದ್ದು, ಬಾಲಿವುಡ್ ಕ್ವೀನ್, ನಟಿ ಕಂಗನಾ ರಣಾವತ್ ತಮ್ಮ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಮಾನವೀಯತೆ ಗೆಲುವು ಇದಾಗಿದ್ದು, ಸುಶಾಂತ್ ಸಿಂಗ್ ಯೋಧರಿಗೆ ಧನ್ಯವಾದಗಳು. ಮೊದಲ ಬಾರಿಗೆ ಒಗ್ಗಟ್ಟಿನ ಶಕ್ತಿಯ ಗೆಲುವಿನ ಅನುಭವವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
ಖಾಸಗಿ ಮಾಧ್ಯಮದ ಜೊತೆ ಮಾತನಾಡಿದ ಕಂಗನಾ ರಣಾವತ್,ಬಾಲಿವುಡ್ ನಲ್ಲಿಯ ಸ್ವಜನಪಕ್ಷಪಾತದಿಂದಾಗಿ ಸುಶಾಂತ್ ನಮ್ಮೊಂದಿಗೆ ಇಲ್ಲ. ಸುಶಾಂತ್ ಪ್ರಕರಣದ ಬಗ್ಗೆ ನಾನು ಪ್ರಶ್ನಿಸಿದಾಗ ನನ್ನ ಧ್ವನಿ ಅಡಗಿಸುವ ಎಲ್ಲ ಪ್ರಯತ್ನಗಳು ನಡೆದವು ಎಂದು ಹೇಳಿದರು.
ಕೆಲವರು ನನ್ನ ಸಿನಿಮಾಗಳಿಂದ ದೂರವಿಡಲು ಪ್ರಯತ್ನಗಳು ನಡೆದಿವೆ. ಕೆಲ ಪಕ್ಷಗಳು ನನ್ನನ್ನು ರಾಜಕೀಯಕ್ಕೆ ಆಹ್ವಾನಿಸುವ ಮೂಲಕ ಸುಶಾಂತ್ ಪ್ರಕರಣದಿಂದ ಹಿಂದೆ ಸರಿಯುವಂತೆ ಆಮಿಷ ಒಡ್ಡಿವೆ. ಆದ್ರೆ ದೇಶದ ಜನತೆ ಸುಶಾಂತ್ ಗೆ ನ್ಯಾಯ ಸಿಗಬೇಕೆಂದು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು. ಬಾಲುವುಡ್ ನಲ್ಲಿಯ ಸ್ವಜನಪಕ್ಷಪಾತದ ಬಗ್ಗೆ ಮಾತನಾಡಿದಾಗ ಸುಶಾಂತ್ ನನಗೆ ಸಾಥ್ ನೀಡಿದ್ದರು. ನನ್ನ ವಿರುದ್ಧ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಯ್ತು. ತನ್ನ ಬೆಳವಣಿಗೆಗೆ ಸ್ವಜನಪಕ್ಷಪಾತ ಅಡ್ಡಿಯಾಗಿದೆ ಎಂದು ಸುಶಾಂತ್ ಹೇಳಿಕೊಂಡಿದ್ದರು. ಅಂದಿನಿಂದ ಸುಶಾಂತ್ ಸಿನಿಮಾಗಳಿಂದ ವಂಚಿತರಾದರು ಎಂದು ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…