ಮುಂಬೈ, : ”ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವು ದುರದೃಷ್ಟಕರ, ಆದರೆ ಕೆಲವರು ಈ ವಿಚಾರದಲ್ಲೇ ನೀಚ ರಾಜಕೀಯ ಮಾಡುತ್ತಿದ್ದಾರೆ” ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಹೇಳಿದ್ದಾರೆ.
ಶಿವಸೇನೆ ಮುಖವಾಣಿ ಸಾಮ್ನಾದಲ್ಲಿ ಸಂಪಾದಕ, ಶಿವಸೇನೆ ನಾಯಕ ಸಂಜಯ್ ರಾವತ್ ಅವರ ಸಂದರ್ಶನದಲ್ಲಿ ಮಾತನಾಡಿರುವ ಅವರು, ”ಯುವ ಪ್ರತಿಭಾವಂತ ನಟ ಸಾವನ್ನಪ್ಪಿರುವುದು ದುರದೃಷ್ಟಕರ. ಆದರೆ ಕೆಲವರು ಈ ವಿಚಾರದಲ್ಲೇ ಕೊಳಕು, ನೀಚ ರಾಜಕೀಯ ಮಾಡುತ್ತಿದ್ದಾರೆ” ಎಂದು ದೂರಿದ್ದಾರೆ.
”ಒಂದು ಜೀವ ಹೋಗಿದೆ. ಆದರೆ ನೀವು ಆ ವಿಚಾರದಲ್ಲೇ ಕೊಳಕು ರಾಜಕೀಯಕ್ಕೆ ಇಳಿದಿದ್ದೀರಿ. ಇದು ಸರಿಯೇ” ಎಂದು ವಿಪಕ್ಷ ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.
ಕಳೆದ ಜೂನ್ 14ರಂದು ಮುಂಬೈಯ ಬಾಂದ್ರಾದಲ್ಲಿರುವ ಅಪಾರ್ಟ್ ಮೆಂಟ್ನಲ್ಲಿ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮೃತದೇಹ ಪತ್ತೆಯಾಗಿದ್ದು ಸುಶಾಂತ್ ಅಭಿಮಾನಿಗಳು ಹಾಗೂ ಕೆಲವು ನಟ, ನಟಿಯರು ಹಾಗೂ ಬಿಜೆಪಿಯು ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆರೋಪಿಸಿದ್ದರು. ಈ ಬಗ್ಗೆ ಸಿಬಿಐ ತನಿಖೆ ನಡೆಸುತ್ತಿದೆ. ಇದೀಗ ಈ ಸಾವು ಪ್ರಕರಣವು ಹಲವು ತಿರುವುಗಳನ್ನು ಪಡೆದಿದ್ದು ಪ್ರಸ್ತುತ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ ಮತ್ತು ಜಾರಿ ನಿರ್ದೇಶನಾಲಯವು ಕೂಡಾ ಡ್ರಗ್, ಅಕ್ರಮ ಹಣ ವರ್ಗಾವಣೆ ವಿಚಾರದಲ್ಲಿಯೂ ತನಿಖೆ ನಡೆಸುತ್ತಿದೆ
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…