ಬೆಂಗಳೂರು: ವಿಶ್ವಸಂಸ್ಥೆಯು ನೀಡಿರುವ ಸುಸ್ಥಿರ ಅಭಿವೃದ್ಧಿಯು 17 ಗುರಿಗಳ ಸಾಧನೆಯಲ್ಲಿ ಕರ್ನಾಟಕವು ದೇಶದಲ್ಲಿ 6 ನೇ ಸ್ಥಾನದಲ್ಲಿದೆ. ಇದನ್ನು ಇನ್ನಷ್ಟು ಉತ್ತಮಗೊಳಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಯೋಜನಾ ಇಲಾಖೆಯು ಸಿದ್ಧ ಪಡಿಸಿರುವ ಇಂದು ಸುಸ್ಥಿರ ಅಭಿವೃದ್ಧಿ ಗುರಿಗಳ ಮುನ್ನೋಟ 2030 ರ ಕ್ರಿಯಾ ಯೋಜನೆಯನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಬಿಡುಗಡೆ ಮಾಡಿ ಮಾತನಾಡಿದರು.
ಸುಸ್ಥಿರ ಅಭಿವೃದ್ಧಿ ಗುರಿಗಳ ಮುನ್ನೋಟ 2030ರ ಕಾರ್ಯತಂತ್ರ ಮತ್ತು ಕ್ರಿಯಾ ಯೋಜನೆಯು ಮುಂದಿನ 10 ವರ್ಷಗಳ ರಾಜ್ಯದಲ್ಲಿ ಸುಸ್ಥಿರ ಅಭಿವೃದ್ಧಿ ಪಥದಲ್ಲಿ ಮುನ್ನಡೆಯಲು ಪೂರಕವಾದ ಮಾರ್ಗಸೂಚಿಗಳನ್ನು ಒದಗಿಸುತ್ತದೆ. ಎಲ್ಲರನ್ನೂ ಒಳಗೊಳ್ಳುವ ಅಭಿವೃದ್ಧಿ ದೃಷ್ಟಿಕೋನವನ್ನು ಅನುಷ್ಠಾನಕ್ಕೆ ತರಲು ಇದು ಸಹಕಾರಿಯಾಗಿದೆ ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.
ರಾಜ್ಯದ ಎಲ್ಲ ಜನರಿಗೆ ಉತ್ತಮ ಜೀವನೋಪಾಯ, ಸ್ವಚ್ಛ ಪರಿಸರ, ಉತ್ತಮ ರೋಗ್ಯ, ಗುಣಮಟ್ಟದ ಶಿಕ್ಷಣ, ಪೌಷ್ಟಿಕ ಆಹಾರ ಇತ್ಯಾದಿ ಗುರಿಗಳನ್ನು ತಲುಪಲು ಈ ಕ್ರಿಯಾ ಯೋಜನೆ ಒತ್ತು ನೀಡುತ್ತದೆ. ಹೆಚ್ಚು ಸುಧಾರಣೆಯ ಅಗತ್ಯವಿರುವ ಪ್ರದೇಶ ಮತ್ತು ಕಾರ್ಯಕ್ರಮಗಳಿಗೆ ಮುಂದಿನ ಆಯವ್ಯಯದಲ್ಲಿ ಅಗತ್ಯ ಅನುದಾನ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕರ್ನಾಟಕ ರಾಜ್ಯ ಯೋಜನಾ ಮಂಡಳಿ ಉಪಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಅವರು ಮಾತನಾಡಿ, ತಾವು ಕರ್ನಾಟಕಕ್ಕಿಂತ ಉತ್ತಮ ಶ್ರೇಯಾಂಕ ಹೊಂದಿರುವ ಕೇರಳ, ಗುಜರಾತ್ ಮತ್ತು ಇತರ ರಾಜ್ಯಗಳಿಗೆ ಭೇಟಿ ನೀಡಿದ್ದು, ಆ ರಾಜ್ಯಗಳಲ್ಲಿ ಸುಸ್ಥಿರ ಅಭಿವೃದ್ಧಿ ಗುರಿ 2030 ಸಾಧನೆಗೆ ಕೈಗೊಂಡಿರುವ ಕ್ರಮಗಳ ಕುರಿತು ಅಧ್ಯಯನ ನಡೆಸಲಾಗಿದೆ. ಇದರ ವಿವರಗಳನ್ನು ಯೋಜನಾ ಮಂಡಳಿಯ ಸಭೆಯಲ್ಲಿ ಪ್ರಸ್ತುತ ಪಡಿಸುವುದಾಗಿ ತಿಳಿಸಿದರು.
ಕಾರ್ಯಕ್ರಮದಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತರಾದ ವಂದಿತಾ ಶರ್ಮ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…