ಮಂಗಳೂರು: ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಪ್ರಾಧಿಕಾರಕ್ಕೆ (ಎನ್ಐಎ) ಹಸ್ತಾಂತರಿಸಬೇಕೆ ಅಥವಾ ಬೇಡವೇ ಎಂಬುದು ರಾಜ್ಯ ಸರ್ಕಾರಕ್ಕೆ ಬಿಟ್ಟದ್ದು, ಯಾವುದೇ ತನಿಖೆಗೆ ತಮ್ಮ ಆಕ್ಷೇಪವಿಲ್ಲ ಎಂದು ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಹೇಳಿದ್ದಾರೆ.
ವಿರೋಧ ಪಕ್ಷ ಬಿಜೆಪಿಯು ಪ್ರಕರಣವನ್ನು ಎನ್ಐಎ ತನಿಖೆಗೆ ಒತ್ತಾಯಿಸುತ್ತಿದೆ ಮತ್ತು ಸ್ಥಳೀಯ ಪೊಲೀಸರಿಂದ ನಡೆಯುತ್ತಿರುವ ತನಿಖೆಯ ಟೀಕೆಗಳ ಕುರಿತು ಮಾಧ್ಯಮದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಖಾದರ್, ಪ್ರಕರಣದ ಎಲ್ಲಾ ಅಪರಾಧಿಗಳನ್ನು ಮತ್ತು ಅಪರಾಧದ ನಂತರ ಹಲ್ಲೆಗಳಲ್ಲಿ ಭಾಗಿಯಾಗಿರುವವರನ್ನು ಬಂಧಿಸುವಂತೆ ನಾನು ಈಗಾಗಲೇ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು. ಯಾರಿಗೂ ಯಾರನ್ನೂ ಕೊಲ್ಲುವ ಹಕ್ಕಿಲ್ಲ ಎಂದು ಹೇಳಿದರು.
ಕೊಲೆ ನಡೆದಾಗ ಉದ್ವಿಗ್ನ ಪರಿಸ್ಥಿತಿ ಇತ್ತು. ಆ ಸಮಯದಲ್ಲಿ ನನ್ನ ಆದ್ಯತೆಯೆಂದರೆ ನನ್ನ ಜಿಲ್ಲೆಯಲ್ಲಿ ಕೋಮು ಸಾಮರಸ್ಯವನ್ನು ಕಾಪಾಡುವುದು. ಆದ್ದರಿಂದ, ನನಗೆ ಯಾವುದೇ ಮಾಹಿತಿ ಬಂದರೂ, ನಾನು ಅದನ್ನು ಸಾರ್ವಜನಿಕವಾಗಿ ಹಂಚಿಕೊಂಡಿದ್ದೇನೆ ಎಂದು ತಿಳಿಸಿದರು. ಈ ಪ್ರಕರಣದಲ್ಲಿ ಪೊಲೀಸರು ಕೆಲವರನ್ನು ಬಂಧಿಸಿ, ವಿಚಾರಣೆ ನಡೆಸುತ್ತಿದ್ದಾರೆ. ಅವರ ವಿರುದ್ಧ ಕಠಿಣ ಶಿಕ್ಷೆ ಆಗುವ ನಿಟ್ಟಿನಲ್ಲಿ ತನಿಖೆ ಮಾಡಲಿ. ರಾಜಕೀಯವಾಗಿ ಒಂದು ವಿಚಾರ ಸಿಕ್ಕರೆ ಸಾಕು ಮಾತನಾಡುತ್ತಾರೆ. ನನ್ನ ವಿರುದ್ಧ ಮಾತ ನಾಡುವವರ ವಿರುದ್ಧ ನಾನೇನೂ ಮಾತನಾಡಲ್ಲ. ದೇವರು ಹಾಗೂ ದೇವರಂತಹ ನನ್ನ ಕ್ಷೇತ್ರದ ಜನರು ಇರುವಾಗ ಇದ್ಯಾವುದರ ಬಗ್ಗೆಯೂ ನಾನು ತಲೆಕೆಡಿಸಿಕೊಳ್ಳುವುದಿಲ್ಲ ಎಂದರು.
ಮೃತಪಟ್ಟ ಭಿಕ್ಷುಕಿಯ ಮನೆಯಲ್ಲಿ 30 ಲಕ್ಷ ರೂ. ನಗದು ಪತ್ತೆ ಮಂಡ್ಯ: ಭಿಕ್ಷಾಟನೆ ಮಾಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯೊಬ್ಬರು ಮೃತಪಟ್ಟಿದ್ದು,…
ಬ್ರಹ್ಮಾವರ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಹತ್ಯೆ; ಆರೋಪಿ ಮಗನ ಬಂಧನ ಉಡುಪಿ: ತಂದೆ–ತಾಯಿಗೆ ಸುತ್ತಿಗೆಯಿಂದ ತಲೆಗೆ ಹೊಡೆದು ಕೊಲೆ…
ಕಾರ್ಕಳ ಪುರಸಭೆಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ.. ಕಡತಗಳ ಪರಿಶೀಲನೆ ಕಾರ್ಕಳ: ಸಾರ್ವಜನಿಕರ ಅರ್ಜಿ ಹಾಗೂ ಕಡತಗಳ ವಿಲೇವಾರಿ ಬಗ್ಗೆ…
25 ಗಂಟೆಗಳ ಗಾಯನದಿಂದ ವಿದುಷಿ ಸಂಗೀತಾ ಬಾಲಚಂದ್ರ ಗೋಲ್ಡನ್ ಬುಕ್ಆಫ್ ವರ್ಲ್ಡ್ ರೆಕಾರ್ಡ್ ದಾಖಲೆ 'ಗೀತ ಗಂಗೋತ್ರಿʼ ಬಿರುದು ನೀಡಿ…
ಕಾಪು ಪುರಸಭೆಗೆ ಲೋಕಾಯುಕ್ತ ದಾಳಿ [gallery columns="1" size="large" ids="117027,117028,117029,117030,117031"]
ದ.ಕ./ಉಡುಪಿ ಜಿಲ್ಲೆಯಲ್ಲಿ ಮೀಲಾದುನ್ನೆಬಿ : ಆ.25ರಂದು ಸಾರ್ವತ್ರಿಕ ರಜೆಗೆ ಸಚಿವ ಯು.ಟಿ.ಖಾದರ್ ಸೂಚನೆ ಮಂಗಳೂರು: ದ.ಕ.ಮತ್ತು ಉಡುಪಿ ಜಿಲ್ಲೆಯಲ್ಲಿ ಆ.…