ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಗೆ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಮತ್ತೆ ಬಜಪೆಗೆ ಆಗಮಿಸಿದ್ದಾರೆ.
ಎನ್ಐಎ ಡಿವೈಎಸ್ಪಿ ರಾಜೀವ್ ಸಿಂಗ್, ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ್ ಸಹಿತ ಐವರು ಅಧಿಕಾರಿಗಳ ತಂಡ ಮಂಗಳವಾರ ಬಜಪೆ ಪೊಲೀಸ್ ಠಾಣೆಗೆ ಆಗಮಿಸಿದ್ದು, ನಿಷೇಧಿತ ಪಿಎಫ್ಐ ಸಂಘಟನೆಯೊಂದಿಗೆ ಸಂಬಂಧ ಹೊಂದಿದ್ದರು ಎನ್ನುವ ಮಾಹಿತಿ ಆಧಾರದಲ್ಲಿ ಮೂವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಿದೆ.
ಕಳೆದ ಒಂದು ವರ್ಷದಿಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ತನಿಖೆ ನಡೆಸುತ್ತಿದೆ. 2025ರ ಆ. 2ರಂದು ಮಂಗಳೂರು ಹೊರವಲಯದ ಸುರತ್ಕಲ್ ಮತ್ತು ಬಜಪೆ ಠಾಣೆ ವ್ಯಾಪ್ತಿಯ 14 ಸ್ಥಳಗಳ ಮೇಲೆ ದಾಳಿ ನಡೆಸಿದ್ದ ಎನ್ಐಎ ಅಧಿಕಾರಿಗಳು ಮಹತ್ವದ ದಾಖಲೆಗಳನ್ನು ಒಯ್ದಿದ್ದರು.
2025ರ ಮೇ 1ರಂದು ಬಜಪೆ ಬಳಿಯ ಕಿನ್ನಿಪದವು ಎಂಬಲ್ಲಿ ರಾತ್ರಿ ಸುಹಾಸ್ ಶೆಟ್ಟಿ ಅವರನ್ನು ಕೊಲೆ ಮಾಡಲಾಗಿತ್ತು. ಪ್ರಕರಣದಲ್ಲಿ ಪಿಎಫ್ಐ ಕಾರ್ಯಕರ್ತರು ಸೇರಿ 12 ಮಂದಿಯನ್ನು ಬಂಧಿಸಲಾಗಿತ್ತು. ವಿದೇಶದಿಂದ ಫಂಡಿಂಗ್ ಆಗಿರುವ ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಎನ್ಐಎ ತನಿಖೆಗೆ ವಹಿಸಲಾಗಿತ್ತು.
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…
ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…