ಸೂಪರ್ ಓವರ್‌ನಲ್ಲಿ ಸರಣಿ ಗೆದ್ದು ಇತಿಹಾಸ ನಿರ್ಮಿಸಿದ ಟೀಂ ಇಂಡಿಯಾ -Vishwanews24

ಗೆಲ್ಲಲು 180 ರನ್ ಗಳ ಗುರಿಯನ್ನು ಪಡೆದ ನ್ಯೂಜಿಲೆಂಡ್ ನಿಗದಿತ 20 ಓವರ್ ಗಳಲ್ಲಿ 179 ರನ್ ಗಳಿಸಿದ ಪರಿಣಾಮ ಪಂದ್ಯ ಟೈ ಆಯ್ತು. ಹೀಗಾಗಿ ಪಂದ್ಯದ ಫಲಿತಾಂಶಕ್ಕಾಗಿ ಸೂಪರ್ ಓವರ್ ಮೊರೆ ಹೋಗಲಾಯ್ತು.

ಭಾರತದ ಪರ ಸೂಪರ್ ಓವರ್ ಆಡಲು ರೋಹಿತ್ ಶರ್ಮಾ ಮತ್ತು ರಾಹುಲ್ ಕ್ರೀಸ್‍ಗೆ ಆಗಮಿಸಿದರು. ಟ್ರೆಂಟ್ ಬೌಲ್ಟ್ ಎಸೆದ ಮೊದಲ ಓವರಿನ ಮೊದಲ ಎಸೆತದಲ್ಲಿ ಎರಡು ರನ್ ಕದಿಯಲು ಹೋಗಿದ್ದ ವೇಳೆ ರೋಹಿತ್ ಶರ್ಮಾ ರನ್ ಔಟ್ ಆಗುವ ಸಾಧ್ಯತೆಯಿತ್ತು. ಕೀಪರ್ ಕೈ ಸೇರಿ ಬಾಲ್ ಕೆಳಗಡೆ ಬಿದ್ದ ಪರಿಣಾಮ ರೋಹಿತ್ ಶರ್ಮಾ ಪಾರಾದರು.

ಎರಡನೇ ಎಸೆತದಲ್ಲಿ ಒಂದು ರನ್ ಬಂದರೆ ಮೂರನೇ ಎಸೆತವನ್ನು ರಾಹುಲ್ ಬೌಂಡರಿಗೆ ಅಟ್ಟಿದರು. ಕೊನೆಯ ಮೂರು ಎಸೆತದಲ್ಲಿ 11 ರನ್ ಬೇಕಿದ್ದಾಗ ನಾಲ್ಕನೇಯ ಎಸೆತದಲ್ಲಿ ರಾಹುಲ್ 1 ರನ್ ಓಡಿದರು. ಕೊನೆಯ ಎರಡು ಎಸೆತದಲ್ಲಿ 10 ರನ್ ಬೇಕಿತ್ತು. ಸಿಕ್ಸ್ ಹೊಡೆಯುವ ಅನಿವಾರ್ಯತೆ ಇದ್ದಾಗ ರೋಹಿತ್ ಶರ್ಮಾ 5ನೇ ಎಸೆತವನ್ನು ಬೌಂಡರಿ ಲೈನ್ ಆಚೆಗೆ ಬಾಲ್ ತಳ್ಳುವ ಮೂಲಕ ಪಂದ್ಯವನ್ನು ಜೀವಂತವಾಗಿಟ್ಟರು. ಕೊನೆಯ ಎಸೆತದಲ್ಲಿ 4 ರನ್ ಬೇಕಿತ್ತು. ಪಂದ್ಯ ಏನಾಗುತ್ತದೋ ಏನೋ ಎನ್ನುವ ಆತಂಕದಲ್ಲಿದ್ದಾಗ ರೋಹಿತ್ ಶರ್ಮಾ ಕೊನೆಯ ಎಸೆತದಲ್ಲಿ ಸಿಕ್ಸರ್ ಸಿಡಿಸುವ ಮೂಲಕ ಭಾರತಕ್ಕೆ ಸ್ಮರಣೀಯ ಜಯವನ್ನು ತಂದುಕೊಟ್ಟರು. 65 ರನ್ ಜೊತೆಗೆ 15 ರನ್ ಹೊಡೆದ ರೋಹಿತ್ ಶರ್ಮಾಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago